ಸುಳ್ಯ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಎರಡನೇ ಬಾರಿ ಪ್ರಮಾನ ವಚನ ಸ್ವೀಕಾರ ಹಾಗೂ ಎರಡನೇ ಬಾರಿ ಎನ್.ಡಿ.ಎ ಸರಕಾರ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರುವ ಸಂಭ್ರಮವನ್ನು ಆಚರಿಸಲು ಸುಳ್ಯದಲ್ಲೂ ಕಾರ್ಯಕರ್ತರು, ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.
ಸಾರ್ವಜನಿಕರಿಗೆ ವಿತರಿಸಲು 10 ಸಾವಿರ ಲಡ್ಡು ಸಿದ್ಧಪಡಿಸಲಾಗಿದೆ. ಮೂರು ಸಾವಿರ ಚಹಾ ವಿತರಣೆ ನಡೆಯಲಿದೆ. ಮೋದಿ ಅಭಿಮಾನಿಗಳಾದ ದಿನೇಶ್ ಎ.ಎಸ್.ನೇತೃತ್ವದ ಅಮ್ಮ ಫ್ಲವರ್ ಸ್ಟಾಲ್, ಹರಿಪ್ರಸಾದ್ ಅವರ ಕೀರ್ತನ್ ಕೆಟರರ್ಸ್, ಸತ್ಯಪ್ರಸಾದ್ ಅವರ ಜ್ಯೋತಿ ಫ್ಲವರ್ ಸ್ಟಾಲ್, ರಾಂಪ್ರಸಾದ್ ಅವರ ಪೂರ್ಣಿಮಾ ಟ್ರಾವೆಲ್ಸ್ ಜಂಟಿಯಾಗಿ ಸಂಜೆ ಲಡ್ಡು ಮತ್ತು ಚಹಾ ವಿತರಿಸುವರು. ಇದಕ್ಕಾಗಿ ಕಳೆದ ಎರಡು ದಿನಗಳಿಂದ 11 ಮಂದಿ ಸೇರಿ ಹತ್ತು ಸಾವಿರ ಲಡ್ಡು ತಯಾರಿಸಿದ್ದಾರೆ. 2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೇರಿದ ಸಂದರ್ಭದಲ್ಲಿ ಇವರು ಇಡೀ ನಗರದಲ್ಲಿ 15 ಸಾವಿರ ಲಡ್ಡು ಹಂಚಿದ್ದರು.
“ಮೋದಿಯವರು ಮತ್ತೆ ಪ್ರಧಾನಿಯಾಗಿ ಅಧಿಕ್ಕಾರಕ್ಕೇರುವುದು ತುಂಬಾ ಖುಷಿ ಕೊಟ್ಟಿದೆ. ಆದುದರಿಂದ ಎಲ್ಲರಿಗೂ ಸಿಹಿ ನೀಡಿ ಸಂಭ್ರಮ ಹಚ್ಚಿಕೊಳ್ಳಬೇಕು ಎಂಬ ನೆಲೆಯಲ್ಲಿ ಲಡ್ಡು ಹಂಚಲಾಗುವುದು” ಎಂದು ಜ್ಯೋತಿ ಫ್ಲವರ್ ಸ್ಟಾಲ್ ನ ಸತ್ಯಪ್ರಸಾದ್ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…