ಸುಳ್ಯ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಎರಡನೇ ಬಾರಿ ಪ್ರಮಾನ ವಚನ ಸ್ವೀಕಾರ ಹಾಗೂ ಎರಡನೇ ಬಾರಿ ಎನ್.ಡಿ.ಎ ಸರಕಾರ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರುವ ಸಂಭ್ರಮವನ್ನು ಆಚರಿಸಲು ಸುಳ್ಯದಲ್ಲೂ ಕಾರ್ಯಕರ್ತರು, ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.
ಸಾರ್ವಜನಿಕರಿಗೆ ವಿತರಿಸಲು 10 ಸಾವಿರ ಲಡ್ಡು ಸಿದ್ಧಪಡಿಸಲಾಗಿದೆ. ಮೂರು ಸಾವಿರ ಚಹಾ ವಿತರಣೆ ನಡೆಯಲಿದೆ. ಮೋದಿ ಅಭಿಮಾನಿಗಳಾದ ದಿನೇಶ್ ಎ.ಎಸ್.ನೇತೃತ್ವದ ಅಮ್ಮ ಫ್ಲವರ್ ಸ್ಟಾಲ್, ಹರಿಪ್ರಸಾದ್ ಅವರ ಕೀರ್ತನ್ ಕೆಟರರ್ಸ್, ಸತ್ಯಪ್ರಸಾದ್ ಅವರ ಜ್ಯೋತಿ ಫ್ಲವರ್ ಸ್ಟಾಲ್, ರಾಂಪ್ರಸಾದ್ ಅವರ ಪೂರ್ಣಿಮಾ ಟ್ರಾವೆಲ್ಸ್ ಜಂಟಿಯಾಗಿ ಸಂಜೆ ಲಡ್ಡು ಮತ್ತು ಚಹಾ ವಿತರಿಸುವರು. ಇದಕ್ಕಾಗಿ ಕಳೆದ ಎರಡು ದಿನಗಳಿಂದ 11 ಮಂದಿ ಸೇರಿ ಹತ್ತು ಸಾವಿರ ಲಡ್ಡು ತಯಾರಿಸಿದ್ದಾರೆ. 2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೇರಿದ ಸಂದರ್ಭದಲ್ಲಿ ಇವರು ಇಡೀ ನಗರದಲ್ಲಿ 15 ಸಾವಿರ ಲಡ್ಡು ಹಂಚಿದ್ದರು.
“ಮೋದಿಯವರು ಮತ್ತೆ ಪ್ರಧಾನಿಯಾಗಿ ಅಧಿಕ್ಕಾರಕ್ಕೇರುವುದು ತುಂಬಾ ಖುಷಿ ಕೊಟ್ಟಿದೆ. ಆದುದರಿಂದ ಎಲ್ಲರಿಗೂ ಸಿಹಿ ನೀಡಿ ಸಂಭ್ರಮ ಹಚ್ಚಿಕೊಳ್ಳಬೇಕು ಎಂಬ ನೆಲೆಯಲ್ಲಿ ಲಡ್ಡು ಹಂಚಲಾಗುವುದು” ಎಂದು ಜ್ಯೋತಿ ಫ್ಲವರ್ ಸ್ಟಾಲ್ ನ ಸತ್ಯಪ್ರಸಾದ್ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…