Advertisement
ನಮ್ಮೂರ ಸುದ್ದಿ

ಮೋದಿ ಪ್ರಮಾಣವಚನ : ಸುಳ್ಯದಲ್ಲಿ ಲಡ್ಡು ಹಂಚಿ ಸಂಭ್ರಮ

Share

ಸುಳ್ಯ: ನರೇಂದ್ರ ಮೋದಿ ನೇತೃತ್ವದಲ್ಲಿ ಎರಡನೇ ಬಾರಿ ಎನ್.ಡಿ.ಎ ಸರಕಾರ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರುವ ಸಂಭ್ರಮವನ್ನು ಸುಳ್ಯದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಲಡ್ಡು ಹಂಚಿ ಆಚರಿಸುತ್ತಿದ್ದಾರೆ. ಸಂಜೆ ನಾಲ್ಕು ಗಂಟೆಯಿಂದಲೇ ಲಡ್ಡು ವಿತರಣೆ ನಡೆಯುತಿದೆ. ಹೀಗೆ ಹಂಚಲು 10 ಸಾವಿರ ಲಡ್ಡು ಸಿದ್ಧಪಡಿಸಲಾಗಿದೆ. ಲಡ್ಡು ಜೊತೆಗೆ ಬಿಸಿ ಬಿಸಿ ಚಹಾ ವಿತರಣೆ ಮಾಡಲಾಗುತಿದೆ. ಇದಕ್ಕಾಗಿ ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ.

 

ಮೋದಿ ಅಭಿಮಾನಿಗಳಾದ ದಿನೇಶ್ ಎ‌.ಎಸ್.ಅವರ ಅಮ್ಮ ಫ್ಲವರ್ ಸ್ಟಾಲ್, ಹರಿಪ್ರಸಾದ್ ಅವರ ಕೀರ್ತನ್ ಕೆಟರರ್ಸ್, ಸತ್ಯಪ್ರಸಾದ್ ಅವರ ಜ್ಯೋತಿ ಫ್ಲವರ್ ಸ್ಟಾಲ್, ರಾಂಪ್ರಸಾದ್ ಅವರ ಪೂರ್ಣಿಮಾ ಟ್ರಾವೆಲ್ಸ್ ಜಂಟಿಯಾಗಿ ಲಡ್ಡು ಮತ್ತು ಚಹಾ ವಿತರಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ರಾತ್ರಿಯ ತನಕವೂ ಲಡ್ಡು ವಿತರಣೆ ನಡೆಯಲಿದೆ.
ಕಳೆದ ಎರಡು ದಿನಗಳಿಂದ 11 ಮಂದಿ ಸೇರಿ ಹತ್ತು ಸಾವಿರ ಲಡ್ಡು ತಯಾರಿಸಿದ್ದಾರೆ. 2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೇರಿದ ಸಂದರ್ಭದಲ್ಲಿ ಇವರು ಇಡೀ ನಗರದಲ್ಲಿ 15 ಸಾವಿರ ಲಡ್ಡು ಹಂಚಿದ್ದರು.

“ಮೋದಿಯವರು ಮತ್ತೆ ಪ್ರಧಾನಿಯಾಗಿ ಅಧಿಕ್ಕಾರಕ್ಕೇರುವುದು ತುಂಬಾ ಖುಷಿ ಕೊಟ್ಟಿದೆ. ಆದುದರಿಂದ ಎಲ್ಲರಿಗೂ ಸಿಹಿ ನೀಡಿ ಸಂಭ್ರಮ ಹಚ್ಚಿಕೊಳ್ಳಬೇಕು ಎಂಬ ನೆಲೆಯಲ್ಲಿ ಲಡ್ಡು ಹಂಚುತ್ತಿದ್ದೇವೆ” ಎಂದು ಅಮ್ಮ ಫ್ಲವರ್ ಸ್ಟಾಲ್ ನ ಎ.ಎಸ್.ದಿನೇಶ್ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

6 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

6 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago