ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಲ್ಲಿ ಸ್ಫರ್ಧೆ ಮಾಡಿದ್ದ ಕನ್ನಡಿಗ, ಸುಳ್ಯದ ಪತ್ರಕರ್ತ , ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳ ವಿರುದ್ಧ “ಹಳ್ಳಿಯಿಂದ ದಿಲ್ಲಿಗೆ ಅಧಿಕಾರ ” ಎಂಬ ಹಿನ್ನೆಲೆಯಲ್ಲಿ ಹೋರಾಟದ ಉದ್ದೇಶದಿಂದ ಸ್ಫರ್ಧೆ ಮಾಡಿದ್ದರು. ಇದೀಗ ವಾರಣಾಸಿಯಲ್ಲಿ ಡಾ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಬಗ್ಗೆ ಅಪೀಲು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಲ್ಲಿ ಸಲ್ಲಿಸಿದ ನಾಮಪತ್ರ ಸ್ವೀಕಾರಗೊಂಡಿದೆ.
ಇದೀಗ ನಾಮಪತ್ರ ತಿರಸ್ಕಾರದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…