Advertisement

ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ

Share

ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ

ಮೂಡಿಗೆರೆ: ಭಾರತೀಯ ಸೈನಿಕರ ಸಾಧನೆಯನ್ನು ಚುನಾವಣೆಯ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರ ದಿಕ್ಕು ತಪ್ಪಿಸುವ ಯತ್ನ ನಡೆಸುತ್ತಿದ್ದು ಇದರಿಂದಲೇ ಬಿಜೆಪಿಯ ಪಥನದ ಹಾದಿ ಪ್ರಾರಂಭವಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮೈತ್ರಿ ಪಕ್ಷದ ಅಭ್ಯರ್ಥಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಸ್ವಾತಂತ್ರ್ಯದ ಬಳಿಕ ದೇಶಕ್ಕೆ ಕಾಡದ ಅಭದ್ರತೆಯು, ಕಳೆದ ಐದು ವರ್ಷಗಳಿಂದ ಕಾಡ ತೊಡಗಿದೆ. ಚುನಾವಣೆಯಲ್ಲಿ ವಾಮ ಮಾರ್ಗವನ್ನು ಅನುಸರಿಸುವ ಯತ್ನವನ್ನು ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿ ರೈತರ ಸಾಲಮನ್ನಾ ಮಾಡುವ ಘೋಷಣೆ ಹೊರಡಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ನಾನು ಯಾವುದನ್ನೂ ಲೆಕ್ಕಿಸದೇ ಸಾಲಮನ್ನಾವನ್ನು ಜಾರಿಗೊಳಿಸಿದೆ. ರೈತರು ಹಾಗೂ ಕಾಫಿ ಬೆಳೆಗಾರರ ಸಮಸ್ಯೆಯನ್ನು ಬಿಜೆಪಿಯಾಗಲೀ, ನರೇಂದ್ರ ಮೋದಿಯಾಗಲೀ ಎಂದಿಗೂ ಆಲಿಸಿಲ್ಲ. ರಾಜ್ಯ ಸರ್ಕಾರ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರ ಪರ ಮಾಡಿದ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ’ ಎಂದು ದೂರಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ.ಜಯಮಾಲಾ ಮಾತನಾಡಿ, ‘ಸಂಸದೆ ಶೋಭಾ ಕರಂದ್ಲಾಜೆ ಅವರು 5 ವರ್ಷದಲ್ಲಿ ಕ್ಷೇತ್ರದತ್ತ ತಲೆ ಹಾಕಿರಲಿಲ್ಲ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬೆಳೆಗಾರರ ಹಾಗೂ ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಅಥವಾ ಬೇರೆಲ್ಲಿಯೂ ಚಕಾರವೆತ್ತಲಿಲ್ಲ. ರಾಜ್ಯ ಸರ್ಕಾರ ಮಾಡಿದ ಉತ್ತಮ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿ ಈಗ ಸ್ವ ಪಕ್ಷೀಯರಿಂದಲೇ ಗೋಬ್ಯಾಕ್ ಚಳವಳಿಗೆ ತುತ್ತಾಗಿದ್ದಾರೆ. ಇಂತಹ ಸಂಸದೆಯನ್ನು ಬಿಜೆಪಿಯವರ ಚಳವಳಿಯಂತೆ ಮನೆಗೆ ಕಳುಹಿಸಬೇಕು’ ಎಂದು ಮನವಿ ಮಾಡಿದರು.

ಮಾಜಿ ಸಚಿವೆ ಮೋಟಮ್ಮ, ಮಾಜಿ ಸಭಾಪತಿ ಬಿ.ಎಲ್.ಶಂಕರ್, ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

5 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

13 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

13 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

13 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

22 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

22 hours ago