Advertisement

ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ

Share

ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ

ಮೂಡಿಗೆರೆ: ಭಾರತೀಯ ಸೈನಿಕರ ಸಾಧನೆಯನ್ನು ಚುನಾವಣೆಯ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರ ದಿಕ್ಕು ತಪ್ಪಿಸುವ ಯತ್ನ ನಡೆಸುತ್ತಿದ್ದು ಇದರಿಂದಲೇ ಬಿಜೆಪಿಯ ಪಥನದ ಹಾದಿ ಪ್ರಾರಂಭವಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮೈತ್ರಿ ಪಕ್ಷದ ಅಭ್ಯರ್ಥಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಸ್ವಾತಂತ್ರ್ಯದ ಬಳಿಕ ದೇಶಕ್ಕೆ ಕಾಡದ ಅಭದ್ರತೆಯು, ಕಳೆದ ಐದು ವರ್ಷಗಳಿಂದ ಕಾಡ ತೊಡಗಿದೆ. ಚುನಾವಣೆಯಲ್ಲಿ ವಾಮ ಮಾರ್ಗವನ್ನು ಅನುಸರಿಸುವ ಯತ್ನವನ್ನು ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿ ರೈತರ ಸಾಲಮನ್ನಾ ಮಾಡುವ ಘೋಷಣೆ ಹೊರಡಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ನಾನು ಯಾವುದನ್ನೂ ಲೆಕ್ಕಿಸದೇ ಸಾಲಮನ್ನಾವನ್ನು ಜಾರಿಗೊಳಿಸಿದೆ. ರೈತರು ಹಾಗೂ ಕಾಫಿ ಬೆಳೆಗಾರರ ಸಮಸ್ಯೆಯನ್ನು ಬಿಜೆಪಿಯಾಗಲೀ, ನರೇಂದ್ರ ಮೋದಿಯಾಗಲೀ ಎಂದಿಗೂ ಆಲಿಸಿಲ್ಲ. ರಾಜ್ಯ ಸರ್ಕಾರ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರ ಪರ ಮಾಡಿದ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ’ ಎಂದು ದೂರಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ.ಜಯಮಾಲಾ ಮಾತನಾಡಿ, ‘ಸಂಸದೆ ಶೋಭಾ ಕರಂದ್ಲಾಜೆ ಅವರು 5 ವರ್ಷದಲ್ಲಿ ಕ್ಷೇತ್ರದತ್ತ ತಲೆ ಹಾಕಿರಲಿಲ್ಲ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬೆಳೆಗಾರರ ಹಾಗೂ ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಅಥವಾ ಬೇರೆಲ್ಲಿಯೂ ಚಕಾರವೆತ್ತಲಿಲ್ಲ. ರಾಜ್ಯ ಸರ್ಕಾರ ಮಾಡಿದ ಉತ್ತಮ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿ ಈಗ ಸ್ವ ಪಕ್ಷೀಯರಿಂದಲೇ ಗೋಬ್ಯಾಕ್ ಚಳವಳಿಗೆ ತುತ್ತಾಗಿದ್ದಾರೆ. ಇಂತಹ ಸಂಸದೆಯನ್ನು ಬಿಜೆಪಿಯವರ ಚಳವಳಿಯಂತೆ ಮನೆಗೆ ಕಳುಹಿಸಬೇಕು’ ಎಂದು ಮನವಿ ಮಾಡಿದರು.

ಮಾಜಿ ಸಚಿವೆ ಮೋಟಮ್ಮ, ಮಾಜಿ ಸಭಾಪತಿ ಬಿ.ಎಲ್.ಶಂಕರ್, ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

5 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

5 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

22 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago