ಸುಳ್ಯ:ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ 50 ಅಂಕ ಕಡಿಮೆಯಾಗಿತ್ತು. ಹಾಗಿದ್ದರೂ ಪೂರ್ತಿ ಅಂಕ ಸಿಗದೆ ವಿದ್ಯಾರ್ಥಿನಿ ಮತ್ತೆ ಸಂಕಷ್ಟ ಪಟ್ಟಿದ್ದಾಳೆ.
ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ ಕಡಿಮೆ ಅಂಕ ದೊರೆತಿದೆ. ಉತ್ತರ ಪತ್ರಿಕೆ ಪರಿಶೀಲಿಸಿದ ಸಂದರ್ಭ ಅಸಲಿ ಕಥೆ ಗೊತ್ತಾಗಿದೆ. ಕೇರ್ಪಳ ನಿವಾಸಿ ಸೋಮನಾಥ ಅವರ ಪುತ್ರಿ ಯುಕ್ತಾ ಕನ್ನಡ ಹೊರತುಪಡಿಸಿ ಇತರ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರು. ಕನ್ನಡದಲ್ಲಿ ಹೆಚ್ಚು ಅಂಕ ಬರಬೇಕಿದ್ದ ಕಾರಣ ಹಣ ಪಾವತಿಸಿ ಉತ್ತರಪತ್ರಿಕೆಯ ಛಾಯಾಪ್ರತಿ ತರಿಸಲಾಯಿತು. ಈ ವೇಳೆ 90 ಅಂಕದಷ್ಟು ಈಕೆ ಸರಿ ಉತ್ತರ ಬರೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಈಕೆಗೆ 50 ಅಂಕ ನಷ್ಟವಾಗಿದೆ.
ಆದರೆ ಹೆಚ್ಚುವರಿ 50 ಅಂಕವನ್ನುಪೂರ್ತಿ ಸೇರಿಸಲು ಸಾಧ್ಯವಿಲ್ಲ. 6 ಅಂಕವಷ್ಟೇ ಸೇರಿಸಬಹುದು ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಆಕೆಯ ಪೋಷಕರು ದೂರಿದ್ದು, ಇದರಿಂದ ಶೇಕಡಾವಾರು ಅಂಕ ಕುಸಿತ ಕಂಡಿದೆ ಎಂದಿದ್ದಾರೆ. ವೈದ್ಯೆಯಾಗುವ ಕನಸು ಕಂಡಿರುವ ಈಕೆ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದಿದ್ದು, 44 ಅಂಕ ನೀಡದಿರುವ ಇಲಾಖೆ ಬಗ್ಗೆ ಅಚ್ಚರಿ ಮೂಡಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…