ಸುಳ್ಯ:ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ 50 ಅಂಕ ಕಡಿಮೆಯಾಗಿತ್ತು. ಹಾಗಿದ್ದರೂ ಪೂರ್ತಿ ಅಂಕ ಸಿಗದೆ ವಿದ್ಯಾರ್ಥಿನಿ ಮತ್ತೆ ಸಂಕಷ್ಟ ಪಟ್ಟಿದ್ದಾಳೆ.
ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ ಕಡಿಮೆ ಅಂಕ ದೊರೆತಿದೆ. ಉತ್ತರ ಪತ್ರಿಕೆ ಪರಿಶೀಲಿಸಿದ ಸಂದರ್ಭ ಅಸಲಿ ಕಥೆ ಗೊತ್ತಾಗಿದೆ. ಕೇರ್ಪಳ ನಿವಾಸಿ ಸೋಮನಾಥ ಅವರ ಪುತ್ರಿ ಯುಕ್ತಾ ಕನ್ನಡ ಹೊರತುಪಡಿಸಿ ಇತರ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರು. ಕನ್ನಡದಲ್ಲಿ ಹೆಚ್ಚು ಅಂಕ ಬರಬೇಕಿದ್ದ ಕಾರಣ ಹಣ ಪಾವತಿಸಿ ಉತ್ತರಪತ್ರಿಕೆಯ ಛಾಯಾಪ್ರತಿ ತರಿಸಲಾಯಿತು. ಈ ವೇಳೆ 90 ಅಂಕದಷ್ಟು ಈಕೆ ಸರಿ ಉತ್ತರ ಬರೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಈಕೆಗೆ 50 ಅಂಕ ನಷ್ಟವಾಗಿದೆ.
ಆದರೆ ಹೆಚ್ಚುವರಿ 50 ಅಂಕವನ್ನುಪೂರ್ತಿ ಸೇರಿಸಲು ಸಾಧ್ಯವಿಲ್ಲ. 6 ಅಂಕವಷ್ಟೇ ಸೇರಿಸಬಹುದು ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಆಕೆಯ ಪೋಷಕರು ದೂರಿದ್ದು, ಇದರಿಂದ ಶೇಕಡಾವಾರು ಅಂಕ ಕುಸಿತ ಕಂಡಿದೆ ಎಂದಿದ್ದಾರೆ. ವೈದ್ಯೆಯಾಗುವ ಕನಸು ಕಂಡಿರುವ ಈಕೆ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದಿದ್ದು, 44 ಅಂಕ ನೀಡದಿರುವ ಇಲಾಖೆ ಬಗ್ಗೆ ಅಚ್ಚರಿ ಮೂಡಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…