Advertisement

ಮೌಲ್ಯಮಾಪಕರ ಎಡವಟ್ಟು , ವಿದ್ಯಾರ್ಥಿನಿಗೆ 50 ಅಂಕ ನಷ್ಟ…!

Share

ಸುಳ್ಯ:ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ 50 ಅಂಕ ಕಡಿಮೆಯಾಗಿತ್ತು. ಹಾಗಿದ್ದರೂ ಪೂರ್ತಿ ಅಂಕ ಸಿಗದೆ ವಿದ್ಯಾರ್ಥಿನಿ ಮತ್ತೆ ಸಂಕಷ್ಟ ಪಟ್ಟಿದ್ದಾಳೆ.

ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ ಕಡಿಮೆ ಅಂಕ ದೊರೆತಿದೆ. ಉತ್ತರ ಪತ್ರಿಕೆ ಪರಿಶೀಲಿಸಿದ ಸಂದರ್ಭ ಅಸಲಿ ಕಥೆ ಗೊತ್ತಾಗಿದೆ. ಕೇರ್ಪಳ ನಿವಾಸಿ ಸೋಮನಾಥ ಅವರ ಪುತ್ರಿ ಯುಕ್ತಾ ಕನ್ನಡ ಹೊರತುಪಡಿಸಿ ಇತರ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರು. ಕನ್ನಡದಲ್ಲಿ ಹೆಚ್ಚು ಅಂಕ ಬರಬೇಕಿದ್ದ ಕಾರಣ ಹಣ ಪಾವತಿಸಿ ಉತ್ತರಪತ್ರಿಕೆಯ ಛಾಯಾಪ್ರತಿ ತರಿಸಲಾಯಿತು. ಈ ವೇಳೆ 90 ಅಂಕದಷ್ಟು ಈಕೆ ಸರಿ ಉತ್ತರ ಬರೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಈಕೆಗೆ 50 ಅಂಕ ನಷ್ಟವಾಗಿದೆ.

ಆದರೆ ಹೆಚ್ಚುವರಿ 50 ಅಂಕವನ್ನುಪೂರ್ತಿ ಸೇರಿಸಲು ಸಾಧ್ಯವಿಲ್ಲ. 6 ಅಂಕವಷ್ಟೇ ಸೇರಿಸಬಹುದು ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಆಕೆಯ ಪೋಷಕರು ದೂರಿದ್ದು, ಇದರಿಂದ ಶೇಕಡಾವಾರು ಅಂಕ ಕುಸಿತ ಕಂಡಿದೆ ಎಂದಿದ್ದಾರೆ. ವೈದ್ಯೆಯಾಗುವ ಕನಸು ಕಂಡಿರುವ ಈಕೆ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದಿದ್ದು, 44 ಅಂಕ ನೀಡದಿರುವ ಇಲಾಖೆ ಬಗ್ಗೆ ಅಚ್ಚರಿ ಮೂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

12 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

17 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

17 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

21 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago