ಸುಳ್ಯ:ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ 50 ಅಂಕ ಕಡಿಮೆಯಾಗಿತ್ತು. ಹಾಗಿದ್ದರೂ ಪೂರ್ತಿ ಅಂಕ ಸಿಗದೆ ವಿದ್ಯಾರ್ಥಿನಿ ಮತ್ತೆ ಸಂಕಷ್ಟ ಪಟ್ಟಿದ್ದಾಳೆ.
ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ ಕಡಿಮೆ ಅಂಕ ದೊರೆತಿದೆ. ಉತ್ತರ ಪತ್ರಿಕೆ ಪರಿಶೀಲಿಸಿದ ಸಂದರ್ಭ ಅಸಲಿ ಕಥೆ ಗೊತ್ತಾಗಿದೆ. ಕೇರ್ಪಳ ನಿವಾಸಿ ಸೋಮನಾಥ ಅವರ ಪುತ್ರಿ ಯುಕ್ತಾ ಕನ್ನಡ ಹೊರತುಪಡಿಸಿ ಇತರ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರು. ಕನ್ನಡದಲ್ಲಿ ಹೆಚ್ಚು ಅಂಕ ಬರಬೇಕಿದ್ದ ಕಾರಣ ಹಣ ಪಾವತಿಸಿ ಉತ್ತರಪತ್ರಿಕೆಯ ಛಾಯಾಪ್ರತಿ ತರಿಸಲಾಯಿತು. ಈ ವೇಳೆ 90 ಅಂಕದಷ್ಟು ಈಕೆ ಸರಿ ಉತ್ತರ ಬರೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಈಕೆಗೆ 50 ಅಂಕ ನಷ್ಟವಾಗಿದೆ.
ಆದರೆ ಹೆಚ್ಚುವರಿ 50 ಅಂಕವನ್ನುಪೂರ್ತಿ ಸೇರಿಸಲು ಸಾಧ್ಯವಿಲ್ಲ. 6 ಅಂಕವಷ್ಟೇ ಸೇರಿಸಬಹುದು ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಆಕೆಯ ಪೋಷಕರು ದೂರಿದ್ದು, ಇದರಿಂದ ಶೇಕಡಾವಾರು ಅಂಕ ಕುಸಿತ ಕಂಡಿದೆ ಎಂದಿದ್ದಾರೆ. ವೈದ್ಯೆಯಾಗುವ ಕನಸು ಕಂಡಿರುವ ಈಕೆ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದಿದ್ದು, 44 ಅಂಕ ನೀಡದಿರುವ ಇಲಾಖೆ ಬಗ್ಗೆ ಅಚ್ಚರಿ ಮೂಡಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…