Advertisement

ಮೌಲ್ಯಮಾಪಕರ ಎಡವಟ್ಟು , ವಿದ್ಯಾರ್ಥಿನಿಗೆ 50 ಅಂಕ ನಷ್ಟ…!

Share

ಸುಳ್ಯ:ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ 50 ಅಂಕ ಕಡಿಮೆಯಾಗಿತ್ತು. ಹಾಗಿದ್ದರೂ ಪೂರ್ತಿ ಅಂಕ ಸಿಗದೆ ವಿದ್ಯಾರ್ಥಿನಿ ಮತ್ತೆ ಸಂಕಷ್ಟ ಪಟ್ಟಿದ್ದಾಳೆ.

ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ ಕಡಿಮೆ ಅಂಕ ದೊರೆತಿದೆ. ಉತ್ತರ ಪತ್ರಿಕೆ ಪರಿಶೀಲಿಸಿದ ಸಂದರ್ಭ ಅಸಲಿ ಕಥೆ ಗೊತ್ತಾಗಿದೆ. ಕೇರ್ಪಳ ನಿವಾಸಿ ಸೋಮನಾಥ ಅವರ ಪುತ್ರಿ ಯುಕ್ತಾ ಕನ್ನಡ ಹೊರತುಪಡಿಸಿ ಇತರ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರು. ಕನ್ನಡದಲ್ಲಿ ಹೆಚ್ಚು ಅಂಕ ಬರಬೇಕಿದ್ದ ಕಾರಣ ಹಣ ಪಾವತಿಸಿ ಉತ್ತರಪತ್ರಿಕೆಯ ಛಾಯಾಪ್ರತಿ ತರಿಸಲಾಯಿತು. ಈ ವೇಳೆ 90 ಅಂಕದಷ್ಟು ಈಕೆ ಸರಿ ಉತ್ತರ ಬರೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಈಕೆಗೆ 50 ಅಂಕ ನಷ್ಟವಾಗಿದೆ.

ಆದರೆ ಹೆಚ್ಚುವರಿ 50 ಅಂಕವನ್ನುಪೂರ್ತಿ ಸೇರಿಸಲು ಸಾಧ್ಯವಿಲ್ಲ. 6 ಅಂಕವಷ್ಟೇ ಸೇರಿಸಬಹುದು ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಆಕೆಯ ಪೋಷಕರು ದೂರಿದ್ದು, ಇದರಿಂದ ಶೇಕಡಾವಾರು ಅಂಕ ಕುಸಿತ ಕಂಡಿದೆ ಎಂದಿದ್ದಾರೆ. ವೈದ್ಯೆಯಾಗುವ ಕನಸು ಕಂಡಿರುವ ಈಕೆ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದಿದ್ದು, 44 ಅಂಕ ನೀಡದಿರುವ ಇಲಾಖೆ ಬಗ್ಗೆ ಅಚ್ಚರಿ ಮೂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

8 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

9 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

10 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

11 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

24 hours ago