ಸುಳ್ಯ:ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ 50 ಅಂಕ ಕಡಿಮೆಯಾಗಿತ್ತು. ಹಾಗಿದ್ದರೂ ಪೂರ್ತಿ ಅಂಕ ಸಿಗದೆ ವಿದ್ಯಾರ್ಥಿನಿ ಮತ್ತೆ ಸಂಕಷ್ಟ ಪಟ್ಟಿದ್ದಾಳೆ.
ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ ಕಡಿಮೆ ಅಂಕ ದೊರೆತಿದೆ. ಉತ್ತರ ಪತ್ರಿಕೆ ಪರಿಶೀಲಿಸಿದ ಸಂದರ್ಭ ಅಸಲಿ ಕಥೆ ಗೊತ್ತಾಗಿದೆ. ಕೇರ್ಪಳ ನಿವಾಸಿ ಸೋಮನಾಥ ಅವರ ಪುತ್ರಿ ಯುಕ್ತಾ ಕನ್ನಡ ಹೊರತುಪಡಿಸಿ ಇತರ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರು. ಕನ್ನಡದಲ್ಲಿ ಹೆಚ್ಚು ಅಂಕ ಬರಬೇಕಿದ್ದ ಕಾರಣ ಹಣ ಪಾವತಿಸಿ ಉತ್ತರಪತ್ರಿಕೆಯ ಛಾಯಾಪ್ರತಿ ತರಿಸಲಾಯಿತು. ಈ ವೇಳೆ 90 ಅಂಕದಷ್ಟು ಈಕೆ ಸರಿ ಉತ್ತರ ಬರೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಈಕೆಗೆ 50 ಅಂಕ ನಷ್ಟವಾಗಿದೆ.
ಆದರೆ ಹೆಚ್ಚುವರಿ 50 ಅಂಕವನ್ನುಪೂರ್ತಿ ಸೇರಿಸಲು ಸಾಧ್ಯವಿಲ್ಲ. 6 ಅಂಕವಷ್ಟೇ ಸೇರಿಸಬಹುದು ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಆಕೆಯ ಪೋಷಕರು ದೂರಿದ್ದು, ಇದರಿಂದ ಶೇಕಡಾವಾರು ಅಂಕ ಕುಸಿತ ಕಂಡಿದೆ ಎಂದಿದ್ದಾರೆ. ವೈದ್ಯೆಯಾಗುವ ಕನಸು ಕಂಡಿರುವ ಈಕೆ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದಿದ್ದು, 44 ಅಂಕ ನೀಡದಿರುವ ಇಲಾಖೆ ಬಗ್ಗೆ ಅಚ್ಚರಿ ಮೂಡಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…