ಸುಳ್ಯ:ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ 50 ಅಂಕ ಕಡಿಮೆಯಾಗಿತ್ತು. ಹಾಗಿದ್ದರೂ ಪೂರ್ತಿ ಅಂಕ ಸಿಗದೆ ವಿದ್ಯಾರ್ಥಿನಿ ಮತ್ತೆ ಸಂಕಷ್ಟ ಪಟ್ಟಿದ್ದಾಳೆ.
ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ ಕಡಿಮೆ ಅಂಕ ದೊರೆತಿದೆ. ಉತ್ತರ ಪತ್ರಿಕೆ ಪರಿಶೀಲಿಸಿದ ಸಂದರ್ಭ ಅಸಲಿ ಕಥೆ ಗೊತ್ತಾಗಿದೆ. ಕೇರ್ಪಳ ನಿವಾಸಿ ಸೋಮನಾಥ ಅವರ ಪುತ್ರಿ ಯುಕ್ತಾ ಕನ್ನಡ ಹೊರತುಪಡಿಸಿ ಇತರ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರು. ಕನ್ನಡದಲ್ಲಿ ಹೆಚ್ಚು ಅಂಕ ಬರಬೇಕಿದ್ದ ಕಾರಣ ಹಣ ಪಾವತಿಸಿ ಉತ್ತರಪತ್ರಿಕೆಯ ಛಾಯಾಪ್ರತಿ ತರಿಸಲಾಯಿತು. ಈ ವೇಳೆ 90 ಅಂಕದಷ್ಟು ಈಕೆ ಸರಿ ಉತ್ತರ ಬರೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಈಕೆಗೆ 50 ಅಂಕ ನಷ್ಟವಾಗಿದೆ.
ಆದರೆ ಹೆಚ್ಚುವರಿ 50 ಅಂಕವನ್ನುಪೂರ್ತಿ ಸೇರಿಸಲು ಸಾಧ್ಯವಿಲ್ಲ. 6 ಅಂಕವಷ್ಟೇ ಸೇರಿಸಬಹುದು ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಆಕೆಯ ಪೋಷಕರು ದೂರಿದ್ದು, ಇದರಿಂದ ಶೇಕಡಾವಾರು ಅಂಕ ಕುಸಿತ ಕಂಡಿದೆ ಎಂದಿದ್ದಾರೆ. ವೈದ್ಯೆಯಾಗುವ ಕನಸು ಕಂಡಿರುವ ಈಕೆ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದಿದ್ದು, 44 ಅಂಕ ನೀಡದಿರುವ ಇಲಾಖೆ ಬಗ್ಗೆ ಅಚ್ಚರಿ ಮೂಡಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…