ಯಕ್ಷಗಾನದಿಂದ ಸಮಾಜಕ್ಕೆ ಮನರಂಜನೆ ಜೊತೆಗೆ ಉತ್ತಮ ಸಂದೇಶ: ಈಶ್ವರಪ್ಪ

Share

ಶಿವಮೊಗ್ಗ: ಯಕ್ಷಗಾನದಿಂದ ಸಮಾಜಕ್ಕೆ ಮನರಂಜನೆ ಜೊತೆಗೆ ಉತ್ತಮ ಸಂದೇಶಗಳು ತಲುಪುತ್ತವೆ ಎಂದು ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಯಕ್ಷಗಾನ ಅಕಾಡೆಮಿ ವತಿಯಿಂದ 2017ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಯಕ್ಷಸಿರಿ, ಗೌರವ ಹಾಗೂ ಪುಸ್ತಕ ಪ್ರಶಸ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಕೆ.ಎಸ್ ಈಶ್ವರಪ್ಪ, ಕಲೆ ಮತ್ತು ಸಾಹಿತ್ಯ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನ ಕಾಪಾಡುವುದಲ್ಲದೆ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹಿರಿಯ ಕಲಾವಿದರನ್ನ ನೋಡಿ ತಿಳಿದುಕೊಳ್ಳಬೇಕಾದ ಅಂಶ ಎಂದರು. ಯಕ್ಷಗಾನ ಅಕಾಡೆಮಿಗೆ ಬೇಕಾಗುವಂತಹ ಸಹಕಾರವನ್ನ ಸರ್ಕಾರದಿಂದ ಒದಗಿಸಲು ನಾನು ಬದ್ಧನಿದ್ದೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

ನಂತರ ಮಾತನಾಡಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ ಹೆಗಡೆ, ಯಕ್ಷರಂಗ ಒಂದು ವಿಶಾಲ ಪ್ರಪಂಚ ಅಲ್ಲಿನ ಮಹಾ ಕಲಾವಿದರುಗಳಿಗೆ ಒಂದು ಪ್ರಶಸ್ತಿ ಸಾಕಾಗುವುದಿಲ್ಲ ಅದನ್ನು ವಿಸ್ತರಿಸುವ ಸಲುವಾಗಿ ಸರ್ಕಾರದಿಂದ ಅನುಮತಿ ಪಡೆದು ಹೆಚ್ಚಿನ ಗೌರವ ಮತ್ತು ಪುಸ್ತಕ ಪ್ರಶಸ್ತಿ ನೀಡಲಾಗುತ್ತಿರುವುದರಿಂದ 2017ನೇ ಸಾಲಿನ ಪ್ರಶಸ್ತಿ ಸ್ವಲ್ಪ ತಡವಾಗಿ ನೀಡಲಾಗುತ್ತಿದೆ ಎಂದರು. ಇಂತಹ ಕಲಾವಿದರನ್ನು ಸನ್ಮಾನಿಸುವುದು ನಮ್ಮೆಲ್ಲರ ಹೆಮ್ಮೆ ಎಂದು ಹೆಗಡೆ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬಲಿಪ ನಾರಾಯಣ ಭಾಗವತರಿಗೆ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿಯನ್ನ ಶಂಕರ್ ಭಾಗವತ್, ಬರೆ ಕೇಶವ ಭಟ್, ಹೆಚ್. ಶ್ರೀಧರ ಹಂದೆ ಕೋಟ, ಎ.ಎಂ ಶಿವಶಂಕರಯ್ಯ, ಕರಿಯಣ್ಣ ಅವರಿಗೆ ನೀಡಲಾಯಿತು.

ಯಕ್ಷಸಿರಿ ಪ್ರಶಸ್ತಿಯನ್ನ ಗಜಾನನ ಗಣಪತಿ ಭಟ್ ಹೊಸ್ತೋಟ, ಮೋಹನ್ ಶೆಟ್ಟಿಗಾರ್, ಪೂಕಳ ಲಕ್ಷ್ಮೀನಾರಾಯಣ ಭಟ್, ಜಮದಗ್ನಿ ಶೀನಾ ನಾಯ್ಕ್, ಜಂಬೂರು ರಾಮಚಂದ್ರ ಶಾನುಭಾಗ್,ಮಹದೇವ ಈಶ್ವರ ಹೆಗಡೆ, ಎ.ಎಸ್ ಲಕ್ಷ್ಮಣಯ್ಯ, ಹರಿದಾಸ್ ನೀವಣೆ ಗಣೇಶ ಭಟ್ಟ, ಎಲ್ ಶಂಕರಪ್ಪ, ಟಿ. ಎಸ್. ರವೀಂದ್ರ ಹಾಗೂ ಪುಸ್ತಕ ಬಹುಮಾನವನ್ನು ಬಲಿಪ ನಾರಾಯಣ ಭಾಗವತ್ ಮತ್ತು ಜಿ. ಎಸ್ ಭಟ್ ಇವರಿಗೆ ಪ್ರಧಾನ ಮಾಡಲಾಯಿತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

6 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

6 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

21 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

21 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

21 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

21 hours ago