Advertisement

ಯಕ್ಷಗಾನದಿಂದ ಸಮಾಜಕ್ಕೆ ಮನರಂಜನೆ ಜೊತೆಗೆ ಉತ್ತಮ ಸಂದೇಶ: ಈಶ್ವರಪ್ಪ

Share

ಶಿವಮೊಗ್ಗ: ಯಕ್ಷಗಾನದಿಂದ ಸಮಾಜಕ್ಕೆ ಮನರಂಜನೆ ಜೊತೆಗೆ ಉತ್ತಮ ಸಂದೇಶಗಳು ತಲುಪುತ್ತವೆ ಎಂದು ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಯಕ್ಷಗಾನ ಅಕಾಡೆಮಿ ವತಿಯಿಂದ 2017ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಯಕ್ಷಸಿರಿ, ಗೌರವ ಹಾಗೂ ಪುಸ್ತಕ ಪ್ರಶಸ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಕೆ.ಎಸ್ ಈಶ್ವರಪ್ಪ, ಕಲೆ ಮತ್ತು ಸಾಹಿತ್ಯ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನ ಕಾಪಾಡುವುದಲ್ಲದೆ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹಿರಿಯ ಕಲಾವಿದರನ್ನ ನೋಡಿ ತಿಳಿದುಕೊಳ್ಳಬೇಕಾದ ಅಂಶ ಎಂದರು. ಯಕ್ಷಗಾನ ಅಕಾಡೆಮಿಗೆ ಬೇಕಾಗುವಂತಹ ಸಹಕಾರವನ್ನ ಸರ್ಕಾರದಿಂದ ಒದಗಿಸಲು ನಾನು ಬದ್ಧನಿದ್ದೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

Advertisement

ನಂತರ ಮಾತನಾಡಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ ಹೆಗಡೆ, ಯಕ್ಷರಂಗ ಒಂದು ವಿಶಾಲ ಪ್ರಪಂಚ ಅಲ್ಲಿನ ಮಹಾ ಕಲಾವಿದರುಗಳಿಗೆ ಒಂದು ಪ್ರಶಸ್ತಿ ಸಾಕಾಗುವುದಿಲ್ಲ ಅದನ್ನು ವಿಸ್ತರಿಸುವ ಸಲುವಾಗಿ ಸರ್ಕಾರದಿಂದ ಅನುಮತಿ ಪಡೆದು ಹೆಚ್ಚಿನ ಗೌರವ ಮತ್ತು ಪುಸ್ತಕ ಪ್ರಶಸ್ತಿ ನೀಡಲಾಗುತ್ತಿರುವುದರಿಂದ 2017ನೇ ಸಾಲಿನ ಪ್ರಶಸ್ತಿ ಸ್ವಲ್ಪ ತಡವಾಗಿ ನೀಡಲಾಗುತ್ತಿದೆ ಎಂದರು. ಇಂತಹ ಕಲಾವಿದರನ್ನು ಸನ್ಮಾನಿಸುವುದು ನಮ್ಮೆಲ್ಲರ ಹೆಮ್ಮೆ ಎಂದು ಹೆಗಡೆ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬಲಿಪ ನಾರಾಯಣ ಭಾಗವತರಿಗೆ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿಯನ್ನ ಶಂಕರ್ ಭಾಗವತ್, ಬರೆ ಕೇಶವ ಭಟ್, ಹೆಚ್. ಶ್ರೀಧರ ಹಂದೆ ಕೋಟ, ಎ.ಎಂ ಶಿವಶಂಕರಯ್ಯ, ಕರಿಯಣ್ಣ ಅವರಿಗೆ ನೀಡಲಾಯಿತು.

Advertisement

ಯಕ್ಷಸಿರಿ ಪ್ರಶಸ್ತಿಯನ್ನ ಗಜಾನನ ಗಣಪತಿ ಭಟ್ ಹೊಸ್ತೋಟ, ಮೋಹನ್ ಶೆಟ್ಟಿಗಾರ್, ಪೂಕಳ ಲಕ್ಷ್ಮೀನಾರಾಯಣ ಭಟ್, ಜಮದಗ್ನಿ ಶೀನಾ ನಾಯ್ಕ್, ಜಂಬೂರು ರಾಮಚಂದ್ರ ಶಾನುಭಾಗ್,ಮಹದೇವ ಈಶ್ವರ ಹೆಗಡೆ, ಎ.ಎಸ್ ಲಕ್ಷ್ಮಣಯ್ಯ, ಹರಿದಾಸ್ ನೀವಣೆ ಗಣೇಶ ಭಟ್ಟ, ಎಲ್ ಶಂಕರಪ್ಪ, ಟಿ. ಎಸ್. ರವೀಂದ್ರ ಹಾಗೂ ಪುಸ್ತಕ ಬಹುಮಾನವನ್ನು ಬಲಿಪ ನಾರಾಯಣ ಭಾಗವತ್ ಮತ್ತು ಜಿ. ಎಸ್ ಭಟ್ ಇವರಿಗೆ ಪ್ರಧಾನ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

9 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

12 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

12 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

20 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

21 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

22 hours ago