Advertisement

ಯಕ್ಷಗಾನದಿಂದ ಸಮಾಜಕ್ಕೆ ಮನರಂಜನೆ ಜೊತೆಗೆ ಉತ್ತಮ ಸಂದೇಶ: ಈಶ್ವರಪ್ಪ

Share

ಶಿವಮೊಗ್ಗ: ಯಕ್ಷಗಾನದಿಂದ ಸಮಾಜಕ್ಕೆ ಮನರಂಜನೆ ಜೊತೆಗೆ ಉತ್ತಮ ಸಂದೇಶಗಳು ತಲುಪುತ್ತವೆ ಎಂದು ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಯಕ್ಷಗಾನ ಅಕಾಡೆಮಿ ವತಿಯಿಂದ 2017ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಯಕ್ಷಸಿರಿ, ಗೌರವ ಹಾಗೂ ಪುಸ್ತಕ ಪ್ರಶಸ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಕೆ.ಎಸ್ ಈಶ್ವರಪ್ಪ, ಕಲೆ ಮತ್ತು ಸಾಹಿತ್ಯ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನ ಕಾಪಾಡುವುದಲ್ಲದೆ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹಿರಿಯ ಕಲಾವಿದರನ್ನ ನೋಡಿ ತಿಳಿದುಕೊಳ್ಳಬೇಕಾದ ಅಂಶ ಎಂದರು. ಯಕ್ಷಗಾನ ಅಕಾಡೆಮಿಗೆ ಬೇಕಾಗುವಂತಹ ಸಹಕಾರವನ್ನ ಸರ್ಕಾರದಿಂದ ಒದಗಿಸಲು ನಾನು ಬದ್ಧನಿದ್ದೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

ನಂತರ ಮಾತನಾಡಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ ಹೆಗಡೆ, ಯಕ್ಷರಂಗ ಒಂದು ವಿಶಾಲ ಪ್ರಪಂಚ ಅಲ್ಲಿನ ಮಹಾ ಕಲಾವಿದರುಗಳಿಗೆ ಒಂದು ಪ್ರಶಸ್ತಿ ಸಾಕಾಗುವುದಿಲ್ಲ ಅದನ್ನು ವಿಸ್ತರಿಸುವ ಸಲುವಾಗಿ ಸರ್ಕಾರದಿಂದ ಅನುಮತಿ ಪಡೆದು ಹೆಚ್ಚಿನ ಗೌರವ ಮತ್ತು ಪುಸ್ತಕ ಪ್ರಶಸ್ತಿ ನೀಡಲಾಗುತ್ತಿರುವುದರಿಂದ 2017ನೇ ಸಾಲಿನ ಪ್ರಶಸ್ತಿ ಸ್ವಲ್ಪ ತಡವಾಗಿ ನೀಡಲಾಗುತ್ತಿದೆ ಎಂದರು. ಇಂತಹ ಕಲಾವಿದರನ್ನು ಸನ್ಮಾನಿಸುವುದು ನಮ್ಮೆಲ್ಲರ ಹೆಮ್ಮೆ ಎಂದು ಹೆಗಡೆ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬಲಿಪ ನಾರಾಯಣ ಭಾಗವತರಿಗೆ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿಯನ್ನ ಶಂಕರ್ ಭಾಗವತ್, ಬರೆ ಕೇಶವ ಭಟ್, ಹೆಚ್. ಶ್ರೀಧರ ಹಂದೆ ಕೋಟ, ಎ.ಎಂ ಶಿವಶಂಕರಯ್ಯ, ಕರಿಯಣ್ಣ ಅವರಿಗೆ ನೀಡಲಾಯಿತು.

ಯಕ್ಷಸಿರಿ ಪ್ರಶಸ್ತಿಯನ್ನ ಗಜಾನನ ಗಣಪತಿ ಭಟ್ ಹೊಸ್ತೋಟ, ಮೋಹನ್ ಶೆಟ್ಟಿಗಾರ್, ಪೂಕಳ ಲಕ್ಷ್ಮೀನಾರಾಯಣ ಭಟ್, ಜಮದಗ್ನಿ ಶೀನಾ ನಾಯ್ಕ್, ಜಂಬೂರು ರಾಮಚಂದ್ರ ಶಾನುಭಾಗ್,ಮಹದೇವ ಈಶ್ವರ ಹೆಗಡೆ, ಎ.ಎಸ್ ಲಕ್ಷ್ಮಣಯ್ಯ, ಹರಿದಾಸ್ ನೀವಣೆ ಗಣೇಶ ಭಟ್ಟ, ಎಲ್ ಶಂಕರಪ್ಪ, ಟಿ. ಎಸ್. ರವೀಂದ್ರ ಹಾಗೂ ಪುಸ್ತಕ ಬಹುಮಾನವನ್ನು ಬಲಿಪ ನಾರಾಯಣ ಭಾಗವತ್ ಮತ್ತು ಜಿ. ಎಸ್ ಭಟ್ ಇವರಿಗೆ ಪ್ರಧಾನ ಮಾಡಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

5 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

5 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

22 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago