ಬೆಳ್ಳಾರೆ: ಯಕ್ಷಗಾನ ಕರಾವಳಿಯ ಗಂಡುಗಲೆಯಾಗಿದೆ. ದೇವದೈವರುಗಳ ಮಹಿಮೆಯ ಅರಿವನ್ನು ಜನರಿಗೆ ಯಕ್ಷಗಾನ ಕಲೆಯ ಮೂಲಕ ಮೂಡಿಸಬಹುದಾಗಿದೆ. ಯಕ್ಷಗಾನದ ಮೂಲಕ ಸಂಸ್ಕೃತಿ ಉಳಿವು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಯಕ್ಷಗಾನವನ್ನು ಯುವಜನಾಂಗದವರು ಉಳಿಸಿಕೊಳ್ಳಬೇಕು ಎಂದು ಐವರ್ನಾಡು ಪ್ರೌಢಶಾಲಾ ಶಿಕ್ಷಕ ಸೂಫಿ.ಸಿ.ಐ ಹೇಳಿದರು.
ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಯನ್ನು ಸುಳ್ಯ ತಾಲೂಕು ಶಿಕ್ಷಕರ ಯಕ್ಷಗಾನ ಒಕ್ಕೂಟದ ಅಧ್ಯಕ್ಷ, ತಾಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕ ಚಿದಾನಂದ.ಕೆ ಉಪಸ್ಥಿತರಿದ್ದರು. ಶಿಕ್ಷಕ ನಾರಾಯಣ ಬಿ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…