Advertisement
ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಲೆ ಸಮಾರೋಪ

Share

ಸುಳ್ಯ : ಸುಳ್ಯದಲ್ಲಿ ನಾಲ್ಕು ದಿನಗಳ ಕಾಲ ಪ್ರಸ್ತುತಪಡಿಸಿದ ತಾಳಮದ್ದಲೆ ಎಲ್ಲೂ ಔಚಿತ್ಯ ಮೀರದೆ, ಪಾತ್ರಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. ಯಕ್ಷಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾರಸಿಕರು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ವಿಶ್ರಾಂತ ಪ್ರಾಂಶುಪಾಲ ಪ್ರೊ| ಟಿ. ಶ್ರೀಕೃಷ್ಣ ಭಟ್ ಆಶಯ ವ್ಯಕ್ತಪಡಿಸಿದರು.

ಅವರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ನಡೆದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ಇಲ್ಲಿನ ಶ್ರೀಕಲ್ಕುಡ ದೈವಸ್ಥಾನದ ಸಹಯೋಗದಲ್ಲಿ ಯುವಕ ಯಕ್ಷ ಕಲಾರಂಗದ ಶೇಖರ ಮಣಿಯಾಣಿ ಇವರ ಸಂಯೋಜನೆಯಲ್ಲಿ ಸೂರಾಲು ಶ್ರೀಮಹಾಲಿಂಗೇಶ್ವರ ಯಕ್ಷ ಬಳಗದವರಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಿತು.
ಸೂರಾಲು ಯಕ್ಷ ಬಳಗದ ಸಂಚಾಲಕ ಡಾ| ರವಿಕುಮಾರ್ ಸೂರಾಲು ಅವರನ್ನು ಸನ್ಮಾನಿಸಲಾಯಿತು.ಯಕ್ಷ ವಾಗ್ಮಿ ಎಂ.ಆರ್.ವಾಸುದೇವ ಸಾಮಗ ಅವರು ಅಭಿನಂದನಾ ಭಾಷಣ ಮಾಡಿ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಡಾ| ರವಿಕುಮಾರ್ ಅವರಿಗೆ ಕಲೆ ಸಿದ್ಧಿಸಿದೆ. ರಂಗಸ್ಥಳದ ಶಿಸ್ತನ್ನು ಕಾಪಾಡುವಲ್ಲಿ ಅವರ ಕಾಳಜಿ ಶ್ಲಾಘನೀಯ ಎಂದರು.

ಕಲಾ ಪ್ರಾಯೋಜಕ ಸಿಎ |ಗಣೇಶ್ ಭಟ್ ಮಾತನಾಡಿ ಪರಿಪೂರ್ಣ ಕಲೆ ಯಕ್ಷಗಾನ. ಇದೀಗ ಈ ಕಲೆಯತ್ತ ಯುವ ಪೀಳಿಗೆ ಆಸಕ್ತರಾಗುತ್ತಿರುವುದು ಆಶಾದಾಯಕ ಎಂದರು.
ಪ್ರಾಯೋಜಕ ನಿವೃತ್ತ ಟೆಲಿಕಾಂ ಅಧಿಕಾರಿ ಎ.ಕೆ.ನಾಯ್ಕ, ದೈವಸ್ಥಾನದ ಧರ್ಮದರ್ಶಿ ಪಿ.ಕೆ.ಉಮೇಶ್ ಮಾತನಾಡಿದರು.

ವ್ಯವಸ್ಥಾಪಕ ಶೇಖರ ಮಣಿಯಾಣಿ ವಂದಿಸಿದರು.ಅಚ್ಯುತ ಅಟ್ಲೂರು ನಿರೂಪಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎಂಜಿನಿಯರ್ ಹರೀಶ್ ನಾಯ್ಕ ಉಪಸ್ಥಿರಿದ್ದರು.
ಬಳಿಕ ಶ್ರೀರಾಮ ನಿರ್ಯಾಣ ಪ್ರಸಂಗ ತಾಳಮದ್ದಲೆ ಪ್ರಸ್ತುತಗೊಂಡಿತು. ಭಾಗವತರಾಗಿ ಡಾ|ರವಿಕುಮಾರ್ ಸೂರಾಲು, ಮೃದಂಗದಲ್ಲಿ ಈಶ್ವರ ಭಂಡಾರಿ, ಚಂಡೆಯಲ್ಲಿ

ಶಂಕರ ಆಚಾರ್ಯ ಗುಡ್ರಿ, ಮುಮ್ಮೇಳದಲ್ಲಿ ಯಕ್ಷ ವಾಗ್ಮಿಗಳಾಗಿ ಎಂ.ಆರ್.ವಾಸುದೇವ ಸಾಮಗ, ಪೂಕಳ ಲಕ್ಷ್ಮೀನಾರಾಯಣ ಭಟ್, ನಿಟ್ಟೂರು ಅನಂತ ಹೆಗ್ಡೆ, ಅಪ್ಪಕುಂಞ ಮಣಿಯಾಣಿ ಮೊದಲಾದವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

18 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

20 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

24 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago