ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಲೆ ಸಮಾರೋಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ : ಸುಳ್ಯದಲ್ಲಿ ನಾಲ್ಕು ದಿನಗಳ ಕಾಲ ಪ್ರಸ್ತುತಪಡಿಸಿದ ತಾಳಮದ್ದಲೆ ಎಲ್ಲೂ ಔಚಿತ್ಯ ಮೀರದೆ, ಪಾತ್ರಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. ಯಕ್ಷಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾರಸಿಕರು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ವಿಶ್ರಾಂತ ಪ್ರಾಂಶುಪಾಲ ಪ್ರೊ| ಟಿ. ಶ್ರೀಕೃಷ್ಣ ಭಟ್ ಆಶಯ ವ್ಯಕ್ತಪಡಿಸಿದರು.

Advertisement

ಅವರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ನಡೆದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ಇಲ್ಲಿನ ಶ್ರೀಕಲ್ಕುಡ ದೈವಸ್ಥಾನದ ಸಹಯೋಗದಲ್ಲಿ ಯುವಕ ಯಕ್ಷ ಕಲಾರಂಗದ ಶೇಖರ ಮಣಿಯಾಣಿ ಇವರ ಸಂಯೋಜನೆಯಲ್ಲಿ ಸೂರಾಲು ಶ್ರೀಮಹಾಲಿಂಗೇಶ್ವರ ಯಕ್ಷ ಬಳಗದವರಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಿತು.
ಸೂರಾಲು ಯಕ್ಷ ಬಳಗದ ಸಂಚಾಲಕ ಡಾ| ರವಿಕುಮಾರ್ ಸೂರಾಲು ಅವರನ್ನು ಸನ್ಮಾನಿಸಲಾಯಿತು.ಯಕ್ಷ ವಾಗ್ಮಿ ಎಂ.ಆರ್.ವಾಸುದೇವ ಸಾಮಗ ಅವರು ಅಭಿನಂದನಾ ಭಾಷಣ ಮಾಡಿ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಡಾ| ರವಿಕುಮಾರ್ ಅವರಿಗೆ ಕಲೆ ಸಿದ್ಧಿಸಿದೆ. ರಂಗಸ್ಥಳದ ಶಿಸ್ತನ್ನು ಕಾಪಾಡುವಲ್ಲಿ ಅವರ ಕಾಳಜಿ ಶ್ಲಾಘನೀಯ ಎಂದರು.

ಕಲಾ ಪ್ರಾಯೋಜಕ ಸಿಎ |ಗಣೇಶ್ ಭಟ್ ಮಾತನಾಡಿ ಪರಿಪೂರ್ಣ ಕಲೆ ಯಕ್ಷಗಾನ. ಇದೀಗ ಈ ಕಲೆಯತ್ತ ಯುವ ಪೀಳಿಗೆ ಆಸಕ್ತರಾಗುತ್ತಿರುವುದು ಆಶಾದಾಯಕ ಎಂದರು.
ಪ್ರಾಯೋಜಕ ನಿವೃತ್ತ ಟೆಲಿಕಾಂ ಅಧಿಕಾರಿ ಎ.ಕೆ.ನಾಯ್ಕ, ದೈವಸ್ಥಾನದ ಧರ್ಮದರ್ಶಿ ಪಿ.ಕೆ.ಉಮೇಶ್ ಮಾತನಾಡಿದರು.

ವ್ಯವಸ್ಥಾಪಕ ಶೇಖರ ಮಣಿಯಾಣಿ ವಂದಿಸಿದರು.ಅಚ್ಯುತ ಅಟ್ಲೂರು ನಿರೂಪಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎಂಜಿನಿಯರ್ ಹರೀಶ್ ನಾಯ್ಕ ಉಪಸ್ಥಿರಿದ್ದರು.
ಬಳಿಕ ಶ್ರೀರಾಮ ನಿರ್ಯಾಣ ಪ್ರಸಂಗ ತಾಳಮದ್ದಲೆ ಪ್ರಸ್ತುತಗೊಂಡಿತು. ಭಾಗವತರಾಗಿ ಡಾ|ರವಿಕುಮಾರ್ ಸೂರಾಲು, ಮೃದಂಗದಲ್ಲಿ ಈಶ್ವರ ಭಂಡಾರಿ, ಚಂಡೆಯಲ್ಲಿ

Advertisement

ಶಂಕರ ಆಚಾರ್ಯ ಗುಡ್ರಿ, ಮುಮ್ಮೇಳದಲ್ಲಿ ಯಕ್ಷ ವಾಗ್ಮಿಗಳಾಗಿ ಎಂ.ಆರ್.ವಾಸುದೇವ ಸಾಮಗ, ಪೂಕಳ ಲಕ್ಷ್ಮೀನಾರಾಯಣ ಭಟ್, ನಿಟ್ಟೂರು ಅನಂತ ಹೆಗ್ಡೆ, ಅಪ್ಪಕುಂಞ ಮಣಿಯಾಣಿ ಮೊದಲಾದವರು ಸಹಕರಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

3 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

3 hours ago

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

9 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

16 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

17 hours ago