Advertisement
ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಲೆ ಸಮಾರೋಪ

Share

ಸುಳ್ಯ : ಸುಳ್ಯದಲ್ಲಿ ನಾಲ್ಕು ದಿನಗಳ ಕಾಲ ಪ್ರಸ್ತುತಪಡಿಸಿದ ತಾಳಮದ್ದಲೆ ಎಲ್ಲೂ ಔಚಿತ್ಯ ಮೀರದೆ, ಪಾತ್ರಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. ಯಕ್ಷಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾರಸಿಕರು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ವಿಶ್ರಾಂತ ಪ್ರಾಂಶುಪಾಲ ಪ್ರೊ| ಟಿ. ಶ್ರೀಕೃಷ್ಣ ಭಟ್ ಆಶಯ ವ್ಯಕ್ತಪಡಿಸಿದರು.

ಅವರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ನಡೆದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ಇಲ್ಲಿನ ಶ್ರೀಕಲ್ಕುಡ ದೈವಸ್ಥಾನದ ಸಹಯೋಗದಲ್ಲಿ ಯುವಕ ಯಕ್ಷ ಕಲಾರಂಗದ ಶೇಖರ ಮಣಿಯಾಣಿ ಇವರ ಸಂಯೋಜನೆಯಲ್ಲಿ ಸೂರಾಲು ಶ್ರೀಮಹಾಲಿಂಗೇಶ್ವರ ಯಕ್ಷ ಬಳಗದವರಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಿತು.
ಸೂರಾಲು ಯಕ್ಷ ಬಳಗದ ಸಂಚಾಲಕ ಡಾ| ರವಿಕುಮಾರ್ ಸೂರಾಲು ಅವರನ್ನು ಸನ್ಮಾನಿಸಲಾಯಿತು.ಯಕ್ಷ ವಾಗ್ಮಿ ಎಂ.ಆರ್.ವಾಸುದೇವ ಸಾಮಗ ಅವರು ಅಭಿನಂದನಾ ಭಾಷಣ ಮಾಡಿ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಡಾ| ರವಿಕುಮಾರ್ ಅವರಿಗೆ ಕಲೆ ಸಿದ್ಧಿಸಿದೆ. ರಂಗಸ್ಥಳದ ಶಿಸ್ತನ್ನು ಕಾಪಾಡುವಲ್ಲಿ ಅವರ ಕಾಳಜಿ ಶ್ಲಾಘನೀಯ ಎಂದರು.

ಕಲಾ ಪ್ರಾಯೋಜಕ ಸಿಎ |ಗಣೇಶ್ ಭಟ್ ಮಾತನಾಡಿ ಪರಿಪೂರ್ಣ ಕಲೆ ಯಕ್ಷಗಾನ. ಇದೀಗ ಈ ಕಲೆಯತ್ತ ಯುವ ಪೀಳಿಗೆ ಆಸಕ್ತರಾಗುತ್ತಿರುವುದು ಆಶಾದಾಯಕ ಎಂದರು.
ಪ್ರಾಯೋಜಕ ನಿವೃತ್ತ ಟೆಲಿಕಾಂ ಅಧಿಕಾರಿ ಎ.ಕೆ.ನಾಯ್ಕ, ದೈವಸ್ಥಾನದ ಧರ್ಮದರ್ಶಿ ಪಿ.ಕೆ.ಉಮೇಶ್ ಮಾತನಾಡಿದರು.

ವ್ಯವಸ್ಥಾಪಕ ಶೇಖರ ಮಣಿಯಾಣಿ ವಂದಿಸಿದರು.ಅಚ್ಯುತ ಅಟ್ಲೂರು ನಿರೂಪಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎಂಜಿನಿಯರ್ ಹರೀಶ್ ನಾಯ್ಕ ಉಪಸ್ಥಿರಿದ್ದರು.
ಬಳಿಕ ಶ್ರೀರಾಮ ನಿರ್ಯಾಣ ಪ್ರಸಂಗ ತಾಳಮದ್ದಲೆ ಪ್ರಸ್ತುತಗೊಂಡಿತು. ಭಾಗವತರಾಗಿ ಡಾ|ರವಿಕುಮಾರ್ ಸೂರಾಲು, ಮೃದಂಗದಲ್ಲಿ ಈಶ್ವರ ಭಂಡಾರಿ, ಚಂಡೆಯಲ್ಲಿ

ಶಂಕರ ಆಚಾರ್ಯ ಗುಡ್ರಿ, ಮುಮ್ಮೇಳದಲ್ಲಿ ಯಕ್ಷ ವಾಗ್ಮಿಗಳಾಗಿ ಎಂ.ಆರ್.ವಾಸುದೇವ ಸಾಮಗ, ಪೂಕಳ ಲಕ್ಷ್ಮೀನಾರಾಯಣ ಭಟ್, ನಿಟ್ಟೂರು ಅನಂತ ಹೆಗ್ಡೆ, ಅಪ್ಪಕುಂಞ ಮಣಿಯಾಣಿ ಮೊದಲಾದವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

5 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

14 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

15 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

16 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

19 hours ago