Advertisement
ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಲೆ ಸಮಾರೋಪ

Share

ಸುಳ್ಯ : ಸುಳ್ಯದಲ್ಲಿ ನಾಲ್ಕು ದಿನಗಳ ಕಾಲ ಪ್ರಸ್ತುತಪಡಿಸಿದ ತಾಳಮದ್ದಲೆ ಎಲ್ಲೂ ಔಚಿತ್ಯ ಮೀರದೆ, ಪಾತ್ರಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. ಯಕ್ಷಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾರಸಿಕರು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ವಿಶ್ರಾಂತ ಪ್ರಾಂಶುಪಾಲ ಪ್ರೊ| ಟಿ. ಶ್ರೀಕೃಷ್ಣ ಭಟ್ ಆಶಯ ವ್ಯಕ್ತಪಡಿಸಿದರು.

ಅವರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ನಡೆದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ಇಲ್ಲಿನ ಶ್ರೀಕಲ್ಕುಡ ದೈವಸ್ಥಾನದ ಸಹಯೋಗದಲ್ಲಿ ಯುವಕ ಯಕ್ಷ ಕಲಾರಂಗದ ಶೇಖರ ಮಣಿಯಾಣಿ ಇವರ ಸಂಯೋಜನೆಯಲ್ಲಿ ಸೂರಾಲು ಶ್ರೀಮಹಾಲಿಂಗೇಶ್ವರ ಯಕ್ಷ ಬಳಗದವರಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಿತು.
ಸೂರಾಲು ಯಕ್ಷ ಬಳಗದ ಸಂಚಾಲಕ ಡಾ| ರವಿಕುಮಾರ್ ಸೂರಾಲು ಅವರನ್ನು ಸನ್ಮಾನಿಸಲಾಯಿತು.ಯಕ್ಷ ವಾಗ್ಮಿ ಎಂ.ಆರ್.ವಾಸುದೇವ ಸಾಮಗ ಅವರು ಅಭಿನಂದನಾ ಭಾಷಣ ಮಾಡಿ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಡಾ| ರವಿಕುಮಾರ್ ಅವರಿಗೆ ಕಲೆ ಸಿದ್ಧಿಸಿದೆ. ರಂಗಸ್ಥಳದ ಶಿಸ್ತನ್ನು ಕಾಪಾಡುವಲ್ಲಿ ಅವರ ಕಾಳಜಿ ಶ್ಲಾಘನೀಯ ಎಂದರು.

ಕಲಾ ಪ್ರಾಯೋಜಕ ಸಿಎ |ಗಣೇಶ್ ಭಟ್ ಮಾತನಾಡಿ ಪರಿಪೂರ್ಣ ಕಲೆ ಯಕ್ಷಗಾನ. ಇದೀಗ ಈ ಕಲೆಯತ್ತ ಯುವ ಪೀಳಿಗೆ ಆಸಕ್ತರಾಗುತ್ತಿರುವುದು ಆಶಾದಾಯಕ ಎಂದರು.
ಪ್ರಾಯೋಜಕ ನಿವೃತ್ತ ಟೆಲಿಕಾಂ ಅಧಿಕಾರಿ ಎ.ಕೆ.ನಾಯ್ಕ, ದೈವಸ್ಥಾನದ ಧರ್ಮದರ್ಶಿ ಪಿ.ಕೆ.ಉಮೇಶ್ ಮಾತನಾಡಿದರು.

ವ್ಯವಸ್ಥಾಪಕ ಶೇಖರ ಮಣಿಯಾಣಿ ವಂದಿಸಿದರು.ಅಚ್ಯುತ ಅಟ್ಲೂರು ನಿರೂಪಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎಂಜಿನಿಯರ್ ಹರೀಶ್ ನಾಯ್ಕ ಉಪಸ್ಥಿರಿದ್ದರು.
ಬಳಿಕ ಶ್ರೀರಾಮ ನಿರ್ಯಾಣ ಪ್ರಸಂಗ ತಾಳಮದ್ದಲೆ ಪ್ರಸ್ತುತಗೊಂಡಿತು. ಭಾಗವತರಾಗಿ ಡಾ|ರವಿಕುಮಾರ್ ಸೂರಾಲು, ಮೃದಂಗದಲ್ಲಿ ಈಶ್ವರ ಭಂಡಾರಿ, ಚಂಡೆಯಲ್ಲಿ

ಶಂಕರ ಆಚಾರ್ಯ ಗುಡ್ರಿ, ಮುಮ್ಮೇಳದಲ್ಲಿ ಯಕ್ಷ ವಾಗ್ಮಿಗಳಾಗಿ ಎಂ.ಆರ್.ವಾಸುದೇವ ಸಾಮಗ, ಪೂಕಳ ಲಕ್ಷ್ಮೀನಾರಾಯಣ ಭಟ್, ನಿಟ್ಟೂರು ಅನಂತ ಹೆಗ್ಡೆ, ಅಪ್ಪಕುಂಞ ಮಣಿಯಾಣಿ ಮೊದಲಾದವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

5 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago