Advertisement
ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಲೆ ಸಮಾರೋಪ

Share

ಸುಳ್ಯ : ಸುಳ್ಯದಲ್ಲಿ ನಾಲ್ಕು ದಿನಗಳ ಕಾಲ ಪ್ರಸ್ತುತಪಡಿಸಿದ ತಾಳಮದ್ದಲೆ ಎಲ್ಲೂ ಔಚಿತ್ಯ ಮೀರದೆ, ಪಾತ್ರಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. ಯಕ್ಷಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾರಸಿಕರು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ವಿಶ್ರಾಂತ ಪ್ರಾಂಶುಪಾಲ ಪ್ರೊ| ಟಿ. ಶ್ರೀಕೃಷ್ಣ ಭಟ್ ಆಶಯ ವ್ಯಕ್ತಪಡಿಸಿದರು.

Advertisement

ಅವರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ನಡೆದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ಇಲ್ಲಿನ ಶ್ರೀಕಲ್ಕುಡ ದೈವಸ್ಥಾನದ ಸಹಯೋಗದಲ್ಲಿ ಯುವಕ ಯಕ್ಷ ಕಲಾರಂಗದ ಶೇಖರ ಮಣಿಯಾಣಿ ಇವರ ಸಂಯೋಜನೆಯಲ್ಲಿ ಸೂರಾಲು ಶ್ರೀಮಹಾಲಿಂಗೇಶ್ವರ ಯಕ್ಷ ಬಳಗದವರಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಿತು.
ಸೂರಾಲು ಯಕ್ಷ ಬಳಗದ ಸಂಚಾಲಕ ಡಾ| ರವಿಕುಮಾರ್ ಸೂರಾಲು ಅವರನ್ನು ಸನ್ಮಾನಿಸಲಾಯಿತು.ಯಕ್ಷ ವಾಗ್ಮಿ ಎಂ.ಆರ್.ವಾಸುದೇವ ಸಾಮಗ ಅವರು ಅಭಿನಂದನಾ ಭಾಷಣ ಮಾಡಿ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಡಾ| ರವಿಕುಮಾರ್ ಅವರಿಗೆ ಕಲೆ ಸಿದ್ಧಿಸಿದೆ. ರಂಗಸ್ಥಳದ ಶಿಸ್ತನ್ನು ಕಾಪಾಡುವಲ್ಲಿ ಅವರ ಕಾಳಜಿ ಶ್ಲಾಘನೀಯ ಎಂದರು.

ಕಲಾ ಪ್ರಾಯೋಜಕ ಸಿಎ |ಗಣೇಶ್ ಭಟ್ ಮಾತನಾಡಿ ಪರಿಪೂರ್ಣ ಕಲೆ ಯಕ್ಷಗಾನ. ಇದೀಗ ಈ ಕಲೆಯತ್ತ ಯುವ ಪೀಳಿಗೆ ಆಸಕ್ತರಾಗುತ್ತಿರುವುದು ಆಶಾದಾಯಕ ಎಂದರು.
ಪ್ರಾಯೋಜಕ ನಿವೃತ್ತ ಟೆಲಿಕಾಂ ಅಧಿಕಾರಿ ಎ.ಕೆ.ನಾಯ್ಕ, ದೈವಸ್ಥಾನದ ಧರ್ಮದರ್ಶಿ ಪಿ.ಕೆ.ಉಮೇಶ್ ಮಾತನಾಡಿದರು.

ವ್ಯವಸ್ಥಾಪಕ ಶೇಖರ ಮಣಿಯಾಣಿ ವಂದಿಸಿದರು.ಅಚ್ಯುತ ಅಟ್ಲೂರು ನಿರೂಪಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎಂಜಿನಿಯರ್ ಹರೀಶ್ ನಾಯ್ಕ ಉಪಸ್ಥಿರಿದ್ದರು.
ಬಳಿಕ ಶ್ರೀರಾಮ ನಿರ್ಯಾಣ ಪ್ರಸಂಗ ತಾಳಮದ್ದಲೆ ಪ್ರಸ್ತುತಗೊಂಡಿತು. ಭಾಗವತರಾಗಿ ಡಾ|ರವಿಕುಮಾರ್ ಸೂರಾಲು, ಮೃದಂಗದಲ್ಲಿ ಈಶ್ವರ ಭಂಡಾರಿ, ಚಂಡೆಯಲ್ಲಿ

ಶಂಕರ ಆಚಾರ್ಯ ಗುಡ್ರಿ, ಮುಮ್ಮೇಳದಲ್ಲಿ ಯಕ್ಷ ವಾಗ್ಮಿಗಳಾಗಿ ಎಂ.ಆರ್.ವಾಸುದೇವ ಸಾಮಗ, ಪೂಕಳ ಲಕ್ಷ್ಮೀನಾರಾಯಣ ಭಟ್, ನಿಟ್ಟೂರು ಅನಂತ ಹೆಗ್ಡೆ, ಅಪ್ಪಕುಂಞ ಮಣಿಯಾಣಿ ಮೊದಲಾದವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

30 minutes ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 hour ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

12 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

16 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

16 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago