Advertisement
ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಲೆ ಸಮಾರೋಪ

Share

ಸುಳ್ಯ : ಸುಳ್ಯದಲ್ಲಿ ನಾಲ್ಕು ದಿನಗಳ ಕಾಲ ಪ್ರಸ್ತುತಪಡಿಸಿದ ತಾಳಮದ್ದಲೆ ಎಲ್ಲೂ ಔಚಿತ್ಯ ಮೀರದೆ, ಪಾತ್ರಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. ಯಕ್ಷಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾರಸಿಕರು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ವಿಶ್ರಾಂತ ಪ್ರಾಂಶುಪಾಲ ಪ್ರೊ| ಟಿ. ಶ್ರೀಕೃಷ್ಣ ಭಟ್ ಆಶಯ ವ್ಯಕ್ತಪಡಿಸಿದರು.

ಅವರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ನಡೆದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ಇಲ್ಲಿನ ಶ್ರೀಕಲ್ಕುಡ ದೈವಸ್ಥಾನದ ಸಹಯೋಗದಲ್ಲಿ ಯುವಕ ಯಕ್ಷ ಕಲಾರಂಗದ ಶೇಖರ ಮಣಿಯಾಣಿ ಇವರ ಸಂಯೋಜನೆಯಲ್ಲಿ ಸೂರಾಲು ಶ್ರೀಮಹಾಲಿಂಗೇಶ್ವರ ಯಕ್ಷ ಬಳಗದವರಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಿತು.
ಸೂರಾಲು ಯಕ್ಷ ಬಳಗದ ಸಂಚಾಲಕ ಡಾ| ರವಿಕುಮಾರ್ ಸೂರಾಲು ಅವರನ್ನು ಸನ್ಮಾನಿಸಲಾಯಿತು.ಯಕ್ಷ ವಾಗ್ಮಿ ಎಂ.ಆರ್.ವಾಸುದೇವ ಸಾಮಗ ಅವರು ಅಭಿನಂದನಾ ಭಾಷಣ ಮಾಡಿ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಡಾ| ರವಿಕುಮಾರ್ ಅವರಿಗೆ ಕಲೆ ಸಿದ್ಧಿಸಿದೆ. ರಂಗಸ್ಥಳದ ಶಿಸ್ತನ್ನು ಕಾಪಾಡುವಲ್ಲಿ ಅವರ ಕಾಳಜಿ ಶ್ಲಾಘನೀಯ ಎಂದರು.

ಕಲಾ ಪ್ರಾಯೋಜಕ ಸಿಎ |ಗಣೇಶ್ ಭಟ್ ಮಾತನಾಡಿ ಪರಿಪೂರ್ಣ ಕಲೆ ಯಕ್ಷಗಾನ. ಇದೀಗ ಈ ಕಲೆಯತ್ತ ಯುವ ಪೀಳಿಗೆ ಆಸಕ್ತರಾಗುತ್ತಿರುವುದು ಆಶಾದಾಯಕ ಎಂದರು.
ಪ್ರಾಯೋಜಕ ನಿವೃತ್ತ ಟೆಲಿಕಾಂ ಅಧಿಕಾರಿ ಎ.ಕೆ.ನಾಯ್ಕ, ದೈವಸ್ಥಾನದ ಧರ್ಮದರ್ಶಿ ಪಿ.ಕೆ.ಉಮೇಶ್ ಮಾತನಾಡಿದರು.

ವ್ಯವಸ್ಥಾಪಕ ಶೇಖರ ಮಣಿಯಾಣಿ ವಂದಿಸಿದರು.ಅಚ್ಯುತ ಅಟ್ಲೂರು ನಿರೂಪಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎಂಜಿನಿಯರ್ ಹರೀಶ್ ನಾಯ್ಕ ಉಪಸ್ಥಿರಿದ್ದರು.
ಬಳಿಕ ಶ್ರೀರಾಮ ನಿರ್ಯಾಣ ಪ್ರಸಂಗ ತಾಳಮದ್ದಲೆ ಪ್ರಸ್ತುತಗೊಂಡಿತು. ಭಾಗವತರಾಗಿ ಡಾ|ರವಿಕುಮಾರ್ ಸೂರಾಲು, ಮೃದಂಗದಲ್ಲಿ ಈಶ್ವರ ಭಂಡಾರಿ, ಚಂಡೆಯಲ್ಲಿ

ಶಂಕರ ಆಚಾರ್ಯ ಗುಡ್ರಿ, ಮುಮ್ಮೇಳದಲ್ಲಿ ಯಕ್ಷ ವಾಗ್ಮಿಗಳಾಗಿ ಎಂ.ಆರ್.ವಾಸುದೇವ ಸಾಮಗ, ಪೂಕಳ ಲಕ್ಷ್ಮೀನಾರಾಯಣ ಭಟ್, ನಿಟ್ಟೂರು ಅನಂತ ಹೆಗ್ಡೆ, ಅಪ್ಪಕುಂಞ ಮಣಿಯಾಣಿ ಮೊದಲಾದವರು ಸಹಕರಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

7 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

13 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

17 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago