ಸುಳ್ಯ: ದೇಲಂಪಾಡಿ ಬನಾರಿ ಶ್ರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.
ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ , “ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ” ಎಂದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಮುರಳಿ ಕಡೆಕಾರ್, ” ಯಕ್ಷಗಾನ ಪತ್ರಿಕೆ ನಡೆಸುವುದು ಒಂದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ” ಎಂದು ಅಭಿಪ್ರಾಯಪಟ್ಟರು.
ಪತ್ರಕರ್ತರರಾದ ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…