ಸುಳ್ಯ: ದೇಲಂಪಾಡಿ ಬನಾರಿ ಶ್ರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.
ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ , “ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ” ಎಂದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಮುರಳಿ ಕಡೆಕಾರ್, ” ಯಕ್ಷಗಾನ ಪತ್ರಿಕೆ ನಡೆಸುವುದು ಒಂದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ” ಎಂದು ಅಭಿಪ್ರಾಯಪಟ್ಟರು.
ಪತ್ರಕರ್ತರರಾದ ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…