ಸುಳ್ಯ: ದೇಲಂಪಾಡಿ ಬನಾರಿ ಶ್ರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.
ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ , “ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ” ಎಂದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಮುರಳಿ ಕಡೆಕಾರ್, ” ಯಕ್ಷಗಾನ ಪತ್ರಿಕೆ ನಡೆಸುವುದು ಒಂದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ” ಎಂದು ಅಭಿಪ್ರಾಯಪಟ್ಟರು.
ಪತ್ರಕರ್ತರರಾದ ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…