ಸುಳ್ಯ: ದೇಲಂಪಾಡಿ ಬನಾರಿ ಶ್ರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.
ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ , “ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ” ಎಂದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಮುರಳಿ ಕಡೆಕಾರ್, ” ಯಕ್ಷಗಾನ ಪತ್ರಿಕೆ ನಡೆಸುವುದು ಒಂದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ” ಎಂದು ಅಭಿಪ್ರಾಯಪಟ್ಟರು.
ಪತ್ರಕರ್ತರರಾದ ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…