ಸುಳ್ಯ: ದೇಲಂಪಾಡಿ ಬನಾರಿ ಶ್ರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.
ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ , “ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ” ಎಂದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಮುರಳಿ ಕಡೆಕಾರ್, ” ಯಕ್ಷಗಾನ ಪತ್ರಿಕೆ ನಡೆಸುವುದು ಒಂದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ” ಎಂದು ಅಭಿಪ್ರಾಯಪಟ್ಟರು.
ಪತ್ರಕರ್ತರರಾದ ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…