ಸುಳ್ಯ: ಸುಳ್ಯ ನಗರದಿಂದ ಅರಂತೋಡು ಕಡೆಗೆ ಕುಡಿದ ಮತ್ತಿನಲ್ಲಿ ಬೈಕ್ ಸವಾರನೊಬ್ಬ ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ ಘಟನೆ ಸುಳ್ಯದ ಅರಂಬೂರಿನಲ್ಲಿ ನಡೆದಿದೆ. ಪೊಲೀಸರು ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕಿದೆ. ಏಕೆಂದರೆ ಇನ್ಯಾರೋ ಬಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.
ಈ ಸವಾರನ ಚಾಲನೆಯಿಂದ ಇತರೇ ವಾಹನಗಳಿಗೆ ತೊಂದರೆ ಉಂಟಾಗಿದ್ದು, ಬೇಸತ್ತ ಇತರೇ ವಾಹನಿಗರು ಆತನ ಹಿಂದೆಯೇ ವೀಡೀಯೋ ಚಿತ್ರೀಕರಿಸಿದ್ದು, ವೀಡೀಯೋದಲ್ಲಿ ಅಪಘಾತ ಸಂಭವಿಸುವ ದೃಶ್ಯವೂ ಕಾಣುತ್ತಿದ್ದು, ಸವಾರನನ್ನು ಅರಂಬೂರಿನ ಯುವಕರು 108 ಅಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ದೃಶ್ಯ ಇದೀಗ ವೈರಲ್ ಆಗಿದೆ.
ಈ ರೀತಿ ಕುಡಿದು ಬೈಕ್ ಓಡಿಸುವವರ ವಿರುದ್ಧ ಪೋಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದು ಬೈಕ್ ಸವಾರ ಬೈಕ್ ಓಡಿಸುವ ರೀತಿ ಹಾಗೂ ಬೀಳುವ ದೃಶ್ಯ ಇದರಲ್ಲಿದೆ…
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…