Advertisement
ಸುದ್ದಿಗಳು

ಯಶಸ್ವಿಯಾಗಿ ಚೇತರಿಸಿಕೊಳ್ಳುತ್ತಿರುವ ಕುಕ್ಕೆ ಸುಬ್ರಹ್ಮಣ್ಯದ ಆನೆ “ಯಶಸ್ವಿ”

Share

ಸುಬ್ರಹ್ಮಣ್ಯ: ಅನಾರೋಗ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆನೆ ಯಶಸ್ವಿಗೆ ಗುರುವಾರ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದೆ.

ನಾಗರಹೊಳೆ ಅಭಯಾರಣ್ಯದ ದುಬಾರೆ ವನ್ಯಸಂರಕ್ಷಣೆ ವಿಭಾಗದ ತಜ್ಞ ವೈದ್ಯ ಡಾ. ಶೆಟ್ಟಿಯಪ್ಪ ಆಗಮಿಸಿ ಶೆಡ್‍ನಲ್ಲಿರುವ ಆನೆಯ ಆರೋಗ್ಯ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ವೈದ್ಯ ಡಾ.ವೆಂಕಟಾಚಲಪತಿ ಸಹಕಾರದಲ್ಲಿ ಆನೆಗೆ ಚಿಕಿತ್ಸೆ ನೀಡಲಾಯಿತು. ಆನೆಯು ಅಜೀರ್ಣದಿಂದ ಬಳಲುತ್ತಿದ್ದು ತಿಂದ ಆಹಾರ ಜೀರ್ಣವಾಗುತಿಲ್ಲ. ದೇಹ ಉಷ್ಣತೆಯೂ ಅಧಿಕವಾಗಿದ್ದು ಆಹಾರ ಜೀರ್ಣವಾಗುತಿಲ್ಲ. ತಿಂದ ಆಹಾರ ಹೊಟ್ಟೆಯಲ್ಲಿ ಕರಗದೆ ಸೊಪ್ಪುವಿನ ನಾರು ಲದ್ದಿ ಜತೆ ಸುತ್ತಿಕೊಂಡು ಲದ್ದಿ ಹಾಕಲು ಸಾಧ್ಯವಾಗುತ್ತಿಲ್ಲ ಎಂದು  ಆನೆಯ ಆರೋಗ್ಯ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಈಗ  ಆಹಾರ ಜೀರ್ಣವಾಗಲು ಔಷಧಿ ನೀಡಲಾಗಿದೆ. ದೇಹದ ಉಷ್ಣಾಂಶ ಕಡಿಮೆಗೊಳಿಸಲು  ಎಳನೀರು ಗುರುವಾರ  ನೀಡಲಾಗಿದೆ. ದೇಹದಲ್ಲಿ ನೀರಿನಂಶ ಹೆಚ್ಚಿಸಲು ತುಸು ಬೆಚ್ಚಗಿನ ನೀರು ಕುಡಿಸಲಾಗುತ್ತಿದೆ. ಜತೆಗೆ ಮೃದು ಆಹಾರವನ್ನು ನೀಡಲಾಗುತ್ತಿದೆ. ಆನೆಯು ಸ್ವಲ್ಪವೇ ಚೇತರಿಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಚಿಕಿತ್ಸೆ ಮುಂದುವರೆಸಲಾಗುತ್ತಿದೆ.

ಆನೆಯ ಆರೋಗ್ಯ ಸುಧಾರಣೆಗೆ ಸಾಕಷ್ಟು ಕಾಳಜಿ ವಹಿಸಿ ಶ್ರಮ ವಹಿಸಲಾಗುತ್ತಿದೆ ಎಂದು ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಶೆಡ್‍ನಲ್ಲೆ ಇದ್ದು ಆನೆಗೆ ಚಿಕಿತ್ಸೆ ನೀಡುತ್ತಿರುವ ಪಶುವೈದ್ಯ ಡಾ.ವೆಂಕಟಾಚಲಪತಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 hour ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

2 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

9 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

10 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago