Advertisement
ಸುದ್ದಿಗಳು

ಯಶಸ್ವಿಯಾಗಿ ಚೇತರಿಸಿಕೊಳ್ಳುತ್ತಿರುವ ಕುಕ್ಕೆ ಸುಬ್ರಹ್ಮಣ್ಯದ ಆನೆ “ಯಶಸ್ವಿ”

Share

ಸುಬ್ರಹ್ಮಣ್ಯ: ಅನಾರೋಗ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆನೆ ಯಶಸ್ವಿಗೆ ಗುರುವಾರ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದೆ.

Advertisement

ನಾಗರಹೊಳೆ ಅಭಯಾರಣ್ಯದ ದುಬಾರೆ ವನ್ಯಸಂರಕ್ಷಣೆ ವಿಭಾಗದ ತಜ್ಞ ವೈದ್ಯ ಡಾ. ಶೆಟ್ಟಿಯಪ್ಪ ಆಗಮಿಸಿ ಶೆಡ್‍ನಲ್ಲಿರುವ ಆನೆಯ ಆರೋಗ್ಯ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ವೈದ್ಯ ಡಾ.ವೆಂಕಟಾಚಲಪತಿ ಸಹಕಾರದಲ್ಲಿ ಆನೆಗೆ ಚಿಕಿತ್ಸೆ ನೀಡಲಾಯಿತು. ಆನೆಯು ಅಜೀರ್ಣದಿಂದ ಬಳಲುತ್ತಿದ್ದು ತಿಂದ ಆಹಾರ ಜೀರ್ಣವಾಗುತಿಲ್ಲ. ದೇಹ ಉಷ್ಣತೆಯೂ ಅಧಿಕವಾಗಿದ್ದು ಆಹಾರ ಜೀರ್ಣವಾಗುತಿಲ್ಲ. ತಿಂದ ಆಹಾರ ಹೊಟ್ಟೆಯಲ್ಲಿ ಕರಗದೆ ಸೊಪ್ಪುವಿನ ನಾರು ಲದ್ದಿ ಜತೆ ಸುತ್ತಿಕೊಂಡು ಲದ್ದಿ ಹಾಕಲು ಸಾಧ್ಯವಾಗುತ್ತಿಲ್ಲ ಎಂದು  ಆನೆಯ ಆರೋಗ್ಯ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಈಗ  ಆಹಾರ ಜೀರ್ಣವಾಗಲು ಔಷಧಿ ನೀಡಲಾಗಿದೆ. ದೇಹದ ಉಷ್ಣಾಂಶ ಕಡಿಮೆಗೊಳಿಸಲು  ಎಳನೀರು ಗುರುವಾರ  ನೀಡಲಾಗಿದೆ. ದೇಹದಲ್ಲಿ ನೀರಿನಂಶ ಹೆಚ್ಚಿಸಲು ತುಸು ಬೆಚ್ಚಗಿನ ನೀರು ಕುಡಿಸಲಾಗುತ್ತಿದೆ. ಜತೆಗೆ ಮೃದು ಆಹಾರವನ್ನು ನೀಡಲಾಗುತ್ತಿದೆ. ಆನೆಯು ಸ್ವಲ್ಪವೇ ಚೇತರಿಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಚಿಕಿತ್ಸೆ ಮುಂದುವರೆಸಲಾಗುತ್ತಿದೆ.

ಆನೆಯ ಆರೋಗ್ಯ ಸುಧಾರಣೆಗೆ ಸಾಕಷ್ಟು ಕಾಳಜಿ ವಹಿಸಿ ಶ್ರಮ ವಹಿಸಲಾಗುತ್ತಿದೆ ಎಂದು ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಶೆಡ್‍ನಲ್ಲೆ ಇದ್ದು ಆನೆಗೆ ಚಿಕಿತ್ಸೆ ನೀಡುತ್ತಿರುವ ಪಶುವೈದ್ಯ ಡಾ.ವೆಂಕಟಾಚಲಪತಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 hour ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

9 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

9 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

9 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

9 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

19 hours ago