ಸುಬ್ರಹ್ಮಣ್ಯ: ಅನಾರೋಗ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆನೆ ಯಶಸ್ವಿಗೆ ಗುರುವಾರ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದೆ.
ನಾಗರಹೊಳೆ ಅಭಯಾರಣ್ಯದ ದುಬಾರೆ ವನ್ಯಸಂರಕ್ಷಣೆ ವಿಭಾಗದ ತಜ್ಞ ವೈದ್ಯ ಡಾ. ಶೆಟ್ಟಿಯಪ್ಪ ಆಗಮಿಸಿ ಶೆಡ್ನಲ್ಲಿರುವ ಆನೆಯ ಆರೋಗ್ಯ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ವೈದ್ಯ ಡಾ.ವೆಂಕಟಾಚಲಪತಿ ಸಹಕಾರದಲ್ಲಿ ಆನೆಗೆ ಚಿಕಿತ್ಸೆ ನೀಡಲಾಯಿತು. ಆನೆಯು ಅಜೀರ್ಣದಿಂದ ಬಳಲುತ್ತಿದ್ದು ತಿಂದ ಆಹಾರ ಜೀರ್ಣವಾಗುತಿಲ್ಲ. ದೇಹ ಉಷ್ಣತೆಯೂ ಅಧಿಕವಾಗಿದ್ದು ಆಹಾರ ಜೀರ್ಣವಾಗುತಿಲ್ಲ. ತಿಂದ ಆಹಾರ ಹೊಟ್ಟೆಯಲ್ಲಿ ಕರಗದೆ ಸೊಪ್ಪುವಿನ ನಾರು ಲದ್ದಿ ಜತೆ ಸುತ್ತಿಕೊಂಡು ಲದ್ದಿ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ಆನೆಯ ಆರೋಗ್ಯ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಈಗ ಆಹಾರ ಜೀರ್ಣವಾಗಲು ಔಷಧಿ ನೀಡಲಾಗಿದೆ. ದೇಹದ ಉಷ್ಣಾಂಶ ಕಡಿಮೆಗೊಳಿಸಲು ಎಳನೀರು ಗುರುವಾರ ನೀಡಲಾಗಿದೆ. ದೇಹದಲ್ಲಿ ನೀರಿನಂಶ ಹೆಚ್ಚಿಸಲು ತುಸು ಬೆಚ್ಚಗಿನ ನೀರು ಕುಡಿಸಲಾಗುತ್ತಿದೆ. ಜತೆಗೆ ಮೃದು ಆಹಾರವನ್ನು ನೀಡಲಾಗುತ್ತಿದೆ. ಆನೆಯು ಸ್ವಲ್ಪವೇ ಚೇತರಿಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಚಿಕಿತ್ಸೆ ಮುಂದುವರೆಸಲಾಗುತ್ತಿದೆ.
ಆನೆಯ ಆರೋಗ್ಯ ಸುಧಾರಣೆಗೆ ಸಾಕಷ್ಟು ಕಾಳಜಿ ವಹಿಸಿ ಶ್ರಮ ವಹಿಸಲಾಗುತ್ತಿದೆ ಎಂದು ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಶೆಡ್ನಲ್ಲೆ ಇದ್ದು ಆನೆಗೆ ಚಿಕಿತ್ಸೆ ನೀಡುತ್ತಿರುವ ಪಶುವೈದ್ಯ ಡಾ.ವೆಂಕಟಾಚಲಪತಿ ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…