Advertisement
ಜಿಲ್ಲೆ

ಯಶಸ್ವಿಯಾಗಿ ನಡೆದ ಉಜಿರೆಯ ಹಲಸು ಹಬ್ಬ

Share

ಉಜಿರೆ: ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಲಸಿನ ಹಬ್ಬ ನಡೆಯಿತು. ಬೆಳ್ತಂಗಡಿಯ ರೋಟರಿ ಸಂಸ್ಥೆ, ಮುಳಿಯ ಪ್ರತಿಷ್ಥಾನ ಹಾಗೂ ಅನ್ಯಾನ್ಯ ಸಂಸ್ಥೆಗಳ ಸಹಯೋಗ. ತುಂಬಾ ವ್ಯವಸ್ಥಿತವಾಗಿ ನಡೆದ ಮೇಳವು ‘ವೀಕೆಂಡ್’ ಗೌಜಿಯಾಗಲಿಲ್ಲ! ಅಪ್ಪಟ ಹಲಸು ಪ್ರಿಯರ ಉಪಸ್ಥಿತಿ. ಹಲಸಿನ ಸವಿಯ ಪರಿಚಯವಿದ್ದ ಪಟ್ಟಣಿಗರು. ಹಲಸಿನ ಒಂದಾದರೂ ಗಿಡವನ್ನೊಯ್ಯಬೇಕೆಂಬ ಸಂಕಲ್ಪದ ಕೃಷಿಕರು.. ಹೀಗೆ.

ಕಸಿ ತಜ್ಞ ಅತ್ರಾಡಿಯ ಗುರುರಾಜ ಬಾಳ್ತಿಲ್ಲಾಯರಿಂದ ಹ ಹಬ್ಬಕ್ಕೆ ಶುಭಚಾಲನೆ.   ಹಲಸಿನ ಅಂತಾರಾಷ್ಟ್ರೀಯ ರಾಯಭಾರಿ ಶ್ರೀ ಪಡ್ರೆಯವರಿಂದ ಹಲಸಿನ ವಿಶ್ವ ದರ್ಶನ, ಹಲಸು ಕೃಷಿಕ ವರ್ಮುಡಿ ಶಿವಪ್ರಸಾದ್ ವರ್ಮುಡಿ ಮತ್ತು ತಳಿ ಸಂರಕ್ಷಕ ಅನಿಲ್ ಬಳೆಂಜರಿಂದ ಅನುಭವ ಗಾಥಾ, ಕೈಲಾರ್ ಆದರ್ಶ ಸುಬ್ರಾಯ, ಹರಿಶ್ಚಂದ್ರ ತೆಂಡೂಲ್ಕರ್,  ಜ್ಯೂಲಿ ಜೋಸ್, ಸುಹಾಸ್ ಮರಿಕೆ, ಯತೀಶ್ ಬೊಂಡಾಲ, ಡಾ.ಪ್ರದೀಪ್ ನಾವೂರು, ಡಾ.ದಿನೇಶ್ ಸರಳಾಯ..ಮೊದಲಾದ ಸಂಪನ್ಮೂಲ ವ್ಯಕ್ತಿಗಳು ಮೆದುಳಿಗೆ ಮೇವನ್ನು ನೀಡಿದರು.

ಸ್ಪರ್ಧೆಗಳಲ್ಲಿ ಗಜಗಾತ್ರದ ಹಲಸು, ಮನೆ ತಯಾರಿ ಉತ್ಪನ್ನಗಳಿಗೆ ಸ್ಪರ್ಧೆ, ವಿದ್ಯಾರ್ಥಿಗಳಿಗೆ ಚಿತ್ರ ರಚನೆ ಸ್ಪರ್ಧೆ, ಸೊಳೆ ತಿನ್ನುವ ಸ್ಪರ್ಧೆ, ಕ್ವಿಜ್.. ಮೊದಲಾದ ಸ್ಪರ್ಧೆಗಳಿಗೆ ಪೈಪೋಟಿ. ಹಲಸು ಸ್ಪರ್ಧೆಗಾಗಿ ಮನೆಯಲ್ಲಿ ತಯಾರಿಸಿದ ಹಲಸಿನ ಎಳೆಯ ಎಲೆಯ ಪಲ್ಯ ಮೇಳದ ಹೈಲೈಟ್. ಇದನ್ನು ತಯಾರಿಸಿದ  ವೇಂಕಟೇಶ್ವರಿಯವರು ಹೊಸ ಸಾಧ್ಯತೆಯತ್ತ ಬೆರಳು ತೋರಿದರು.


ತುಂಬಾ ಅಚ್ಚುಕಟ್ಟಾದ ಮಳಿಗೆ ವ್ಯವಸ್ಥೆ. ಎಲ್ಲಾ ಮೇಳಗಳಲ್ಲಿ ಇರುವಂತಹ ಮಳಿಗೆದಾರರು ಕಂಡುಬಂದರೂ ಸಿರಿಧಾನ್ಯಗಳ ಖಾದ್ಯಗಳ ಮಳಿಗೆ, ಹಲಸಿನ ಸಾಬೂನು, ಸ್ಥಳದಲ್ಲೇ ತಯಾರಿಸಿದ ಹಲಸಿನ ಬೀಜದ ಹೋಳಿಗೆ.. ಮೊದಲಾದುವು ಗಮನ ಸೆಳೆದುವು. ಹೊರ ಆವರಣದಲ್ಲಿ ವಿವಿಧ ನರ್ಸರಿಗಳ ಕಸಿ ಸಸಿಗಳ ಪ್ರದರ್ಶನದಲ್ಲಿ ಆಸಕ್ತರ ಗುಂಪು ಗಮನೀಯವಾಗಿತ್ತು. ಹಬ್ಬದಿಂದ ಮರಳುವಾಗ ಅನೇಕರ ಕೈಯಲ್ಲಿ ಹ ಗಿಡಗಳಿದ್ದುವು. ಮನೆಗೆ ಒಯ್ಯುವ ಖಾದ್ಯಗಳ ಪೊಟ್ಟಣಗಳಿದ್ದುವು. ಕೆಲವು ಮಳಿಗೆಗಳಲ್ಲಿ ಹ ರುಚಿಗಳನ್ನು ಅಮ್ಮಂದಿರು ಕಾಗದಕ್ಕಿಳಿಸಿಕೊಳ್ಳುತ್ತಿದ್ದರು.

ಹಲಸಿನ ಹಬ್ಬದ ಸಂಪನ್ನತೆಗೆ ಹಲವಾರು ಕೈಗಳ ಶ್ರಮ ಅಗತ್ಯ. ಕೆಲವೆಡೆ ಇಂತಹ ಶ್ರಮಿಕರ ಸಂಖ್ಯೆ ಕ್ಷೀಣಿಸಿದ್ದರಿಂದ ಮೇಳ ಸೊರಗುವುದೂ ಇದೆ. ಉಜಿರೆ ಮೇಳದಲ್ಲಿ ಸ್ವಯಂಸೇವಕರ ಸಂಖ್ಯೆ ಹಿರಿದಾಗಿತ್ತು. ಎಲ್ಲಾ ವಿಭಾಗಗಳೂ ಅಚ್ಚುಕಟ್ಟಾಗಿ ನಿರ್ವಹಿಸಲ್ಪಟ್ಟಿದ್ದುವು.

 


ಎರಡು ತಿಂಗಳ ಹಿಂದೆಯೇ ಹಬ್ಬದ ಸಂಘಟಕರ ವಾಟ್ಸಾಪ್ ಬಳಗ ತುಂಬಾ ಸಕ್ರಿಯವಾಗಿತ್ತು. ಕ್ಷಣಕ್ಷಣಕ್ಕೆ ಮೇಳದ ವ್ಯವಸ್ಥೆಗಳ ಅಪ್‍ಡೇಟ್ ಸಿಗುತ್ತಿದ್ದುವು. ಅವುಗಳನ್ನು ನೋಡುತ್ತಾ ಇದ್ದಂತೆ ಸಂಘಟಕರ ಕಾಳಜಿ ವ್ಯಕ್ತವಾಗುತ್ತಿತ್ತು. ಅವೆಲ್ಲಾ ಇಂದು ಮೇಳೈಸಿತು. ಹಬ್ಬ ಸಂಪನ್ನಗೊಂಡಿತು.

ಇದುವರೆಗೆ ಚಿಕ್ಕ ಚಿಕ್ಕ ಗುಂಪುಗಳಲ್ಲಿ, ಸರಕಾರಿ ವ್ಯವಸ್ಥೆ, ಸರಕಾರೇತರ ಸಂಸ್ಥೆಗಳಲ್ಲಿ ಹಬ್ಬವು ಆಯೋಜನೆಯಾಗುತ್ತಿತ್ತು. ಈ ಬಾರಿ ರೋಟರಿ ಸಂಸ್ಥೆಯು ಹಲಸಿನ ಪರಿಮಳವನ್ನು ಆಘ್ರಾಣಿಸಿಕೊಂಡಿರುವುದು ಶ್ಲಾಘನೀಯವಾದ ವಿಚಾರ.

 

(ಚಿತ್ರ ಕೃಪೆ : ಹಲಸು ಹಬ್ಬ ವಾಟ್ಸಾಪ್ ಬಳಗ)

.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

4 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

14 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

18 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

19 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

19 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

19 hours ago