ಯಕ್ಷಗಾನ : ಮಾತು-ಮಸೆತ

ಯಾರಿಗೆ ಧೈರ್ಯ ಉಂಟು ಮಾರಾಯ್ರೆ, ‘ಈ ತುಪ್ಪದ ಭರಣಿಯನ್ನು ಒಲೆಯ ಬುಡದಲ್ಲಿ ಇಡಲು…!’

Share

ಪ್ರಸಂಗ : ಭೀಷ್ಮ ವಿಜಯ

Advertisement

ಪಾತ್ರ : ಭೀಷ್ಮ
(ಸಂದರ್ಭ : ಅಂಬೆಯು ತನ್ನನ್ನು ಸಾಲ್ವನಲ್ಲಿಗೆ ಕಳುಹಿಸಬೇಕೆಂದು ಬಿನ್ನವಿಸುತ್ತಾಳೆ)

(ಸ್ವಗತ) ಓಯ್… ಕೆಲವು ಸಲ ಹೂವಿನ ಜೇನು ಕುಡಿಯುವ ನೊಣವೂ ಅಮೇಧ್ಯದಲ್ಲಿ ಕುಳಿತುಕೊಳ್ಳುತ್ತದೆ. ಫಕ್ಕನೆ ಹೂವಿಗೆ ಹಾರಿ ಹೋಗುತ್ತದೆ. ಆದರೆ ಕೆಲವು ನೊಣಗಳು ಹಾಗಲ್ಲ. ಹೂವಿನ ಸುತ್ತಲೂ ತಿರುಗುತ್ತವೆ. ಬಿಡಾರ ಮಾಡಲು ಅಲ್ಲಿಗೇ ಬರ್ತಾವೆ! ಆದ್ದರಿಂದ ಇದು (ಇವಳು) ‘ಜೇನು ನೊಣ’ ಅಲ್ಲ. ಕಾಶಿದೇಶದ ಉತ್ತಮ ಕ್ಷತ್ರಿಯನಿಗೆ ಜ್ಯೇಷ್ಠ ಪುತ್ರಿಯಾಗಿ ಹುಟ್ಟಿದ ಇವಳ ಅಭಿರುಚಿ.. ಛೇ..

ನಾನು ಇವಳನ್ನು ವಿಚಾರಣೆ ಮಾಡಿದ್ದಲ್ಲ. ನನ್ನ ಮನೆ ದೇವರು ಮರ್ಯಾದಿ ಕಾದದ್ದು. ನನ್ನ ಮಗನಿಗೋ – ಇದ್ರೆ – ಇಂತದ್ದಾದ್ರೂ ಮದುವೆ ಮಾಡಿಯೇನು? ಯಾಕೆ? ‘ಬೇಡದೇ ಇದ್ದುದನ್ನು ನನಗೆ ಗಂಟು ಹಾಕಿದ’ ಅಂತ ಮಗ ಹೇಳಲಾರ! ಇದು ಹಾಗೋ.. ನನ್ನ ಚಿಕ್ಕತಾಯಿಯ ಮಗ.. ನೋಡಿದ್ರಾ.. ಅಂತಾದ್ದನ್ನು ತನ್ನ ತಮ್ಮನಿಗೆ ಜತೆಗೂಡಿಸಿದ ಎಂಬ ಅಪವಾದ ಬಾರದೇ? ಅದಕ್ಕೆ ಹೇಳೋದ.. ಮತ್ತೊಬ್ಬನ ಆಸ್ತಿಯ ಲೆಕ್ಕಾಚಾರ ಬರೆಯುವವನಿಗೆ ಗಣಿತ ಶಾಸ್ತ್ರ ಹೇಳಿ ಕೊಡಲು ಗೊತ್ತಿರಬೇಕು. ಸ್ವಂತ ಮನೆಯ ಲೆಕ್ಕದಲ್ಲಿ ನಾಲ್ಕು ಹೆಚ್ಚೋ, ನಾಲ್ಕು ಕಡಿಮೆಯೋ ಆದರೆ ಇವನಿಗೇ ಲಾಭ, ನಷ್ಟ. ಇನ್ನೊಬ್ಬರ ಮನೆಯಲ್ಲಿ ಹೆಚ್ಚಾದರೆ ಮಾತನಾಡುವುದಿಲ್ಲ. ಕಡಿಮೆಯಾದರೆ..

ಹಾಗೆ ನೋಡಿ, ಹಸ್ತಿನಾವತಿಯಲ್ಲಿ ರಾತ್ರಿ, ಹಗಲು ಕಣ್ಣಿಗೆ ಎಣ್ಣೆ ಹಾಕಿ ಕಾಯುತ್ತಾ ಇದ್ದೇನೆ. ನನಗೆ ಮದುವೆಯಾದ ಹೆಂಡತಿಯೋ, ನನ್ನ ಮಕ್ಕಳೋ.. ಇಲ್ಲಿಯ ‘ಧರ್ಮಾಧಿಕಾರಿ’ ನಾನು. ‘ಪ್ರಜಾಧಿಕಾರಿ’ ಅಲ್ಲ. ಯಾರಿಗೂ ಗೊತ್ತಾಗದೇ ಇದ್ದುದು ನನಗಂದು ಗೊತ್ತಾಯಿತು – ಕಾಶಿ ದೇಶದ ಸ್ವಯಂವರ ವಿಚಾರ. ಹೋದರೆ ಎಷ್ಟು..ಬಂದರೆ ಎಷ್ಟು ಎಂದು ಸುಖವಾಗಿ ಮೂರು ಹೊತ್ತು ಊಟ ಮಾಡಿ ನಿದ್ದೆ ಮಾಡುತ್ತಿದ್ದರೆ ಕಾಶಿಯಲ್ಲಿ ಒಟ್ಟುಗೂಡಿದ ಕೆಲವರು ಹಸ್ತಿನಾವತಿಗೆ ‘ಗಾಯ’ ಮಾಡುತ್ತಿದ್ರು. ಅದಕ್ಕೆ ನಾನು ಎಷ್ಟೋ ಸಲ ಹೇಳುವುದು ‘ದೇವರು ಕಾಪಾಡಿದ. ನಮ್ಮ ಊರಿನ ಸತ್ಯ ದೊಡ್ಡದು’ ಅಂತ. ನನ್ನ ತಮ್ಮನಿಗೆ ಮದುವೆ ಆದ ಮೇಲೆ ಗೊತ್ತಾಗುತ್ತಿದ್ದರೆ ‘ಯಾವ ಬಾವಿಗೆ ಹಾರೋದು ನಾನು?’ ಅದಕ್ಕೇ ಹೇಳೋದು ‘ಯಥೋ ಧರ್ಮಃ ಯಥೋ ಜಯಃ’. ಧರ್ಮವಿದ್ದಲ್ಲಿ ಜಯ ಉಂಟು.

ಆದೀತು.. ಇವಳು ಪರಮ ಸುಂದರಿ. ಇವಳನ್ನು ಒಬ್ಬಳೇ ಹೋಗು ಅಂತ ಹೇಳಿದ್ರೆ.. ಕೂಡದು. ಯಾಕೆಂದರೆ ಯಾವುದೋ ಮನೆಯಲ್ಲಿದ್ದ ಸೊತ್ತನ್ನು ಭೀಷ್ಮ ತೆಕ್ಕೊಂಡು ಬಂದುದು. ಅದು ನಾಳೆಗೆ ಯಾವನ ಮನೆಯಲ್ಲಿಯೋ ಇದ್ರೆ ಭೀಷ್ಮನಿಗೂ ಅವನಿಗೂ ಒಳಗಿಂದೊಳಗೆ ‘ಕೈಯುಂಟು’ ಅಂತ ಕೆಟ್ಟ ಹೆಸರು ನಮಗಲ್ವೋ ಮಾರಾಯ್ರೆ ಬರೋದು. ಕಾಶಿ ದೇಶದಿಂದ ಇವಳನ್ನು ಕರೆದುಕೊಂಡು ಬಂದುದನ್ನು ಸಾರ್ವಜನಿಕರು ಕಂಡಿದ್ದಾರೆ. ಇವಳನ್ನು ಒಬ್ಬಳನ್ನೇ ಕಳುಹಿಸಿದರೆ ದಾರಿಯಲ್ಲಿ ಯಾವನಾದರೂ ಒಬ್ಬ ಹೊತ್ತುಕೊಂಡು ಹೋಗುವುದು, ಇಲ್ಲಾದ್ರೆ ಅಲ್ಲಿ ತಲಪುವಾಗ ‘ಸಾಲ್ವನ ಊರು ಎಷ್ಟು ದೂರ ಉಂಟೋ ಏನೋ, ಅವನಿಗಿಂತ ಇವನೇನು ಕಡಿಮೆ’ ಎಂದು ಇವಳು ಅವನನ್ನು ಮೆಚ್ಚಿಕೊಳ್ಳುವುದು..!

ಸರಿ.. ಹಾಗಾಗಿ ಇವಳ ಜತೆ ಒಬ್ಬ ಗಂಡುಸನ್ನು ಕಳುಹಿಸಬೇಕು. ಯಾರಿಗೆ ಧೈರ್ಯ ಉಂಟು ಮಾರಾಯ್ರೆ, ‘ಈ ತುಪ್ಪದ ಭರಣಿಯನ್ನು ಒಲೆಯ ಬುಡದಲ್ಲಿ ಇಡಲು.!’ ಯಾವ ಗಂಡಸರನ್ನು ಈ ವಿಷಯದಲ್ಲಿ ನಂಬಲಾರೆ. ನಮ್ಮ ತಂದೆಗೆ ಎಂಭತ್ತು ವರುಷವಾಗಿರುವಾಗ ಚಿಕ್ಕಮ್ಮನಾಗಿರುವವಳಿಗೆ ಹದಿನೆಂಟು ವರುಷ! ಎಂಭತ್ತನೇ ವರುಷದ ನಮ್ಮ ಅಪ್ಪನಿಗೆ ಹಾಗಾಗಿದೆ ಎಂದು ಗೊತ್ತಿದ್ದ ಈ ಮಗ ಮೀಸೆ ಬಂದ ಗಂಡಸರನ್ನು ಇವಳೊಂದಿಗೆ ಕಳುಹಿಸಲು ನಂಬಿಯಾನಾ? ಹಾಗೆಂದು ಒಬ್ಬಳನ್ನೇ ಕಳುಹಿಸುವ ಹಾಗಿಲ್ಲ… ಹೋ ಹೋ.. ಒಬ್ಬರಿದ್ದಾರೆ. ಈ ಹೊತ್ತಿಗೆ ನೆನಪು ಬಂತು. ನಾನು ಅವರನ್ನು ಗುರುಗಳೇ ಅಂತ ಹೇಳೋದು. ನಮ್ಮ ತಂದೆಯವರ ಕಾಲಕ್ಕೆ ಇದ್ದಾರೆ. ಅವರ ಹೆಸರನ್ನು ಕೇಳಲಿಲ್ಲ. ನಾವು ಆಚಾರ್ಯರು ಎಂದು ಸಮಷ್ಠಿಯಿಂದ ಹೇಳೋದು. ಗುರು, ಆಚಾರ್ಯ ಒಂದೇ ಅರ್ಥ ಕೊಡದೇ ಇದ್ದರೂ ಹತ್ತಿರ ಹತ್ತಿರದ ಅರ್ಥ ಕೊಡುತ್ತದೆ. ಪರಶುರಾಮರೂ ಗುರು ಹೌದು, ಆಚಾರ್ಯರೂ ಹೌದಲ್ಲಾ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

2 hours ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

2 hours ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

14 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

15 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

15 hours ago