Advertisement
ಯಕ್ಷಗಾನ : ಮಾತು-ಮಸೆತ

ಯಾವತ್ತೂ ವ್ಯಕ್ತಿತ್ವ ನೂರಾರು ಕನ್ನಡಿಗಳಲ್ಲಿ ನೂರಾರು ಪ್ರತಿಬಿಂಬಗಳನ್ನು ಬಾಕಿದ್ದವರಿಗೆ ತೋರಿಸಿಕೊಡುವಂತೆ…!

Share

ಶೇಣಿ ಗೋಪಾಲಕೃಷ್ಣ ಭಟ್ಟರ ‘ಶಿವ’
ಪ್ರಸಂಗ : ಗಣೇಶೋದ್ಭವ

Advertisement
Advertisement
Advertisement
Advertisement

 

Advertisement

ನಿಮಿಷ ನಿಮಿಷಕ್ಕೆ ಬದಲಾವಣೆ ಹೊಂದುತ್ತಿರುವ, ಎಲ್ಲರ ದೃಷ್ಟಿಗೆ ಸಿಕ್ಕುವ ದೃಶ್ಯರೂಪವಾದಂತಹ ಜಗತ್ತು ಕಾರ್ಯವೇ ಹೊರತು ಕಾರಣವಲ್ಲ. ಕಾರಣಕ್ಕೆ ಬದಲಾವಣೆ ಇಲ್ಲ. ಈ ತತ್ವವನ್ನು ತಿಳಿದವರೇ ವಿಜ್ಞಾನಿಗಳು ಅಥವಾ ಜ್ಞಾನಿಗಳು. ಹಾಗಾಗಿ ಕಾರ್ಯರೂಪವಾದಂತಹ ಸಕಲ ಸಚರಾಚರ ಜಗತ್ತಿಗೆ ಕಾರಣರೂಪವಾದಂತಹ ಒಂದು ಸದ್ವಸ್ತು ಇದೆ. ಅದೇ ‘ಕಾರಣಂ ಕಾರಣಾನಾಂ’ ಅಥವಾ ‘ಮಹಾ ಕಾರಣ.’ ಇದನ್ನು ಗುರುತಿಸುವುದು ಹೇಗೆ? ಗುರುತಿಸುವುದಕ್ಕೆ ಅದಕ್ಕೆ ಆಕೃತಿಯಿಲ್ಲ. ಆದರೆ ಅದರ ಗುಣ ವಿಶೇಷಗಳನ್ನು ಗುರುತಿಸುವುದಕ್ಕೆ ಬರುತ್ತದೆ. ಮೊದಲನೆಯದ್ದಾದಂತಹ ಹೆಸರು ‘ಸತ್ಯ’ವೆಂದು. ಎರಡನೆಯದ್ದು ಮಂಗಲಕಲರವಾದ ‘ಶಿವ’ನೆಂದು. ಇನ್ನೊಂದು ಎಲ್ಲರಿಗೂ ಆಪ್ಯಾಯಮಾನವಾದ ಆನಂದವನ್ನು ಒದಗಿಸಿಕೊಡುವ ‘ಆನಂದ’ವೆಂದು. ಹಾಗಾಗಿ ‘ಸತ್ಯಂ, ಶಿವಂ, ಸುಂದರಂ’, ‘ಸತ್ ಚಿತ್ ಆನಂದ’ ಹೀಗೆ ಪ್ರತಿಪಾದಿಸಲ್ಪಡುತ್ತದೆ.

ಆದ ಕಾರಣ ಒಂದೇ ಒಂದಾದಂತಹ ಯಾವತ್ತೂ ವ್ಯಕ್ತಿತ್ವ ನೂರಾರು ಕನ್ನಡಿಗಳಲ್ಲಿ ನೂರಾರು ಪ್ರತಿಬಿಂಬಗಳನ್ನು ಬಾಕಿದ್ದವರಿಗೆ ತೋರಿಸಿಕೊಡುವಂತೆ, ಕುಂಭಸಹಸ್ರ ಉದಕದೊಳಗೆ ಬಿಂಬಿಸುವ ಸೂರ್ಯನೊಬ್ಬನಂತೆ ಶಿವನಿರುತ್ತಾನೆ. ಶಿವನು ತನ್ನ ಮುಂದೆ ಇದ್ದಂತಹ ಮಾಯಾರೂಪವಾದ ಕನ್ನಡಿಯಲ್ಲಿ, ಆ ಕನ್ನಡಿಯ ಬಣ್ಣವನ್ನು ಅನುಸರಿಸಿಕೊಂಡು ಒಂದರಲ್ಲಿ ಬೆಳ್ಳಗೆ, ಒಂದರಲ್ಲಿ ಕೆಂಪು, ಇನ್ನೊಂದರಲ್ಲಿ ಕಪ್ಪು ವರ್ಣದಿಂದ ಕಾಣಿಸುತ್ತಾನೋ ಎಂಬಂತೆ ತನ್ನ ‘ಮಾಯೆ’ಯೆನ್ನುವ ಆ ಪಾರದರ್ಶಕ ಕನ್ನಡಿಯಲ್ಲಿ ‘ಸತ್ಯ ರಜ ತಮ’ ಗುಣದಿಂದ, ‘ಬ್ರಹ್ಮ, ವಿಷ್ಣು, ಮಹೇಶ್ವರ’ ಹೀಗೆ ಮೂರು ಮೂರ್ತಿಗಳಾಗಿ ಗೋಚರಿಸುತ್ತದೆ. ಇದೇ ಕಾರಣದಿಂದ ಮತ್ತೊಮ್ಮೆ ಮೈಯೊಡೆದು ಬರಬೇಕಾಗುತ್ತದೆ ಎಂಬ ತತ್ವೇಣ ವೈಕುಂಠದಲ್ಲಿ ಶ್ರೀಹರಿ, ಸತ್ಯಲೋಕದಲ್ಲಿ ಬ್ರಹ್ಮದೇವ, ರಜತಾದ್ರಿಯಲ್ಲಿ ಕೈಲಾಸವಾಸಿ ಸದಾಶಿವ. ಮಹಾದೇವ ಎಂಬುದು ನಮ್ಮ ಅಸ್ತಿತ್ವಕ್ಕೆ ವಿದ್ವಾಂಸರು ಕೊಟ್ಟಂತಹ ಚಿತ್ರಣ. ಅವರ ಭಾವಕ್ಕೆ ತಕ್ಕಂತೆ ನಾವು ಮೈಯೊಡೆದಿದ್ದೇವೆ.

Advertisement

ಆದರೆ ಒಂದಿದೆ. ನಿಜವಾಗಿಯೂ ನಮಗೆ ಹೆಂಡತಿ ಯಾಕೆ? ಮಕ್ಕಳು ಯಾಕೆ? ಸಂಸಾರ ಯಾಕೆ? ಶುದ್ಧನಾದಂತಹ ಶಿವನು ತಾನು ತಾನಾಗಿ ಏನೂ ಮಾಡಲಾರ. ‘ಕುಂಟ-ಕುರುಡ’ ನ್ಯಾಯದಂತೆ ಕುಂಟನಿಗೆ ಕಣ್ಣಿದೆ, ಆದರೆ ನಡೆಯುವುದಕ್ಕೆ ಕಾಲಿಲ್ಲ. ಒಬ್ಬನ ಹೆಗಲಿನಲ್ಲಿ ಮತ್ತೊಬ್ಬ ಏರಿ ಕುಳಿತಾಗ ಕಣ್ಣಿನ ಕೆಲಸ ಮೇಲಿದ್ದವರು ಮಾಡಿದರೆ, ಕಾಲಿನ ಕೆಲಸ ಕೆಳಗಿದ್ದವರು ಮಾಡುತ್ತಾರೆ ಎಂಬ ರೂಪಕದಂತೆ ನನ್ನ ಮಾಯೆಯನ್ನು ನಾನು ನನ್ನಲ್ಲಿ ಸೇರಿಸಿಕೊಂಡಿದ್ದೇನೆ. ಅಂದರೆ ಪರ್ವತ ರಾಜಕುಮಾರಿಯಾದ ಪಾರ್ವತಿಯನ್ನು ಕಾಲಿನ ಸ್ಥಾನದಲ್ಲಿ ಇಟ್ಟುಕೊಂಡು; ನಿಜವಾಗಿ ನಡೆಯದ, ನುಡಿಯದೇ ಇದ್ದ ಶಿವನಾದ ನಾನು ಲೋಕದ ಕಣ್ಣಾಗಿ ಅವಳ ಹೆಗಲನ್ನೇರಿ ಸಂಚರಿಸುವಂತೆ ಈ ರಜತಾದ್ರಿಯಲ್ಲಿ ವಾಸವಾಗಿದ್ದೇನೆ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

4 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

8 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

8 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

9 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

1 day ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

1 day ago