Advertisement
ಅನುಕ್ರಮ

ಯುಗಾದಿ ಮತ್ತೆ ಬಂದಿದೆ | ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ

Share
ಯುಗಾದಿ ಹಬ್ಬದ ಶುಭಾಶಯಗಳು.

ಯುಗಾದಿ ಮತ್ತೆ ಬಂದಿದೆ. ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ. ಯುುಗಾದಿ

Advertisement
Advertisement
ಮುಂದಿನ ವರ್ಷ ವೂ ಬರುತ್ತದೆ. ಎಂದಿನಂತಲ್ಲ ಈ ಬಾರಿ ಯುಗಾದಿ. ಸಂಭ್ರಮಕ್ಕೊಂದು ಸೀಮಾ ರೇಖೆಯಿರಲಿ. ಈ ದಿನ ನಮ್ಮ ಮನೆಯಲ್ಲಿ ಏನಿದೆಯೋ ಅದರಲ್ಲೇ ಹಬ್ಬ ಮಾಡೋಣ. ಪ್ರತಿ ವರ್ಷ ದೇವಾಲಯಗಳಿಗೆ ಹೋಗುತ್ತಿದ್ದರೆ ಇಂದು ಮನೆಯಲ್ಲೇ ನಮಸ್ಕರಿಸೋಣ.  ನೈವೇದ್ಯ ಸಮರ್ಪಿಸೋಣ.  ದೇವರಿಗೆ ಗೊತ್ತಲ್ಲವೇ ಕೊರೊನಾ ರಕ್ಕಸ ತನ್ನ ಕಬಂಧಬಾಹುವಿನಲ್ಲಿ ಎಲ್ಲರನ್ನೂ ಆಪೋಷನ ತೆಗೆದು ಕೊಳ್ಳಲು ಕಾಯುತ್ತಿದ್ದಾನೆಂದು. ಎಲ್ಲಿ ಯಾವಾಗ ಬಲಿ ಸಿಗುತ್ತದೆಂದು,  ನಿಮಿಷ ನಿಮಿಷಕ್ಕೂ  ಹೆಚ್ಚುತ್ತಿರುವ  ಕೊರೊನಾ ಸೋಂಕಿತರ ಸಂಖ್ಯೆ  ಸೂಚಿಸುತ್ತಿದೆ.
ಸರಕಾರ , ಮಾದ್ಯಮ, ಪೋಲಿಸರು, ವೈದ್ಯಕೀಯ ತಂಡ ಎಲ್ಲರೂ ಮನೆಯಲ್ಲೇ ಇರಲು ಸೂಚಿಸುತ್ತಿದ್ದಾರೆ. ಹೆದರುವ ಅಗತ್ಯವಿಲ್ಲದಿದ್ದರೂ  ಜಾಗೃತರಾಗುವತ್ತ ಗಮನ ಹರಿಸ ಬೇಕಾಗಿದೆ.  ಪ್ರಧಾನಮಂತ್ರಿ  ನರೇಂದ್ರ ಮೋದಿ ಯವರ  ಭಾರತ ಲಾಕ್ ಡೌನ್ ಕರೆಗೆ  ನಾವು ತಲೆ ಬಾಗಲೇ ಬೇಕು .     ನಮ್ಮ ದೇಶ , ನಮ್ಮ ಪರಿಸರ ,  ಜನತೆ‌ ಉಳಿಯ ಬೇಕಾದರೆ  ಈ ಲಾಕ್ ಡೌನ್ ಅಗತ್ಯ. ಜನತೆ ಇನ್ನೂ ಎಚ್ಚೆತ್ತು ಕೊಂಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಒಬ್ಬನೇ ಒಬ್ಬ ಎಚ್ಚರ ತಪ್ಪಿದರೂ ಕೊರೊನಾದ ಕಪಿಮುಷ್ಟಿಯಲ್ಲಿ  ಇಡೀ ಭಾರತವೇ ನಲುಗ ಬೇಕಾಗಿದೆ. ಈ ಸಂಘರ್ಷ ದಲ್ಲಿ ಗೆಲುವು ನಮ್ಮದೇ ಆಗಲಿ ಎಂಬ ನಿರೀಕ್ಷೆ ಯೊಂದಿಗೆ. 21 ದಿನಗಳ  ಸ್ಥಬ್ದ ಭಾರತ ಮತ್ತೆ ತನ್ನ ಕಂಟಕಗಳನ್ನು ನಿವಾರಿಸಿ  ಎದ್ದೇಳುವಾಗಹೊಸ ಭಾರತದ ಉದಯವಾಗಿರುತ್ತದೆ.
ಯುಗಾದಿ ಎಂದರೆ ನಮಗೆ ಹೊಸವರ್ಷ.  ಹೊಸ ಕನಸುಗಳು ,  ನಿರೀಕ್ಷೆಗಳು , ಎಲ್ಲವೂಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ.  ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ. ಆದರೆ ಬೆಲ್ಲವೇನೋ ಮನೆಯಲ್ಲಿ ಇರಬಹುದು ಬೇವು ಎಲ್ಲರಿಗೂ ಸಿಗುತ್ತದೋ ಇಲ್ಲವೋ. ಎನೇ ಇರಲಿ, ಇದ್ದರಲ್ಲಿ ಹಬ್ಬ ಮಾಡೋಣ. ಮುಂದಿನ ಬಾರಿಯ ಯುಗಾದಿಯನ್ನು ತುಂಬಾ ಖುಷಿಯಿಂದ ಕಳೆಯುವಂತಹ ಭವಿಷ್ಯ ನಮ್ಮದಾಗಲಿ.
ಯುಗಾದಿ ಹಬ್ಬದ ಶುಭಾಶಯಗಳು.
* ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

51 minutes ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

1 hour ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

22 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago