Advertisement
ಅಂಕಣ

ಯುಗಾದಿ ಮತ್ತೆ ಬಂದಿದೆ | ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ

Share
ಯುಗಾದಿ ಹಬ್ಬದ ಶುಭಾಶಯಗಳು.

ಯುಗಾದಿ ಮತ್ತೆ ಬಂದಿದೆ. ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ. ಯುುಗಾದಿ

Advertisement
Advertisement
Advertisement
Advertisement
ಮುಂದಿನ ವರ್ಷ ವೂ ಬರುತ್ತದೆ. ಎಂದಿನಂತಲ್ಲ ಈ ಬಾರಿ ಯುಗಾದಿ. ಸಂಭ್ರಮಕ್ಕೊಂದು ಸೀಮಾ ರೇಖೆಯಿರಲಿ. ಈ ದಿನ ನಮ್ಮ ಮನೆಯಲ್ಲಿ ಏನಿದೆಯೋ ಅದರಲ್ಲೇ ಹಬ್ಬ ಮಾಡೋಣ. ಪ್ರತಿ ವರ್ಷ ದೇವಾಲಯಗಳಿಗೆ ಹೋಗುತ್ತಿದ್ದರೆ ಇಂದು ಮನೆಯಲ್ಲೇ ನಮಸ್ಕರಿಸೋಣ.  ನೈವೇದ್ಯ ಸಮರ್ಪಿಸೋಣ.  ದೇವರಿಗೆ ಗೊತ್ತಲ್ಲವೇ ಕೊರೊನಾ ರಕ್ಕಸ ತನ್ನ ಕಬಂಧಬಾಹುವಿನಲ್ಲಿ ಎಲ್ಲರನ್ನೂ ಆಪೋಷನ ತೆಗೆದು ಕೊಳ್ಳಲು ಕಾಯುತ್ತಿದ್ದಾನೆಂದು. ಎಲ್ಲಿ ಯಾವಾಗ ಬಲಿ ಸಿಗುತ್ತದೆಂದು,  ನಿಮಿಷ ನಿಮಿಷಕ್ಕೂ  ಹೆಚ್ಚುತ್ತಿರುವ  ಕೊರೊನಾ ಸೋಂಕಿತರ ಸಂಖ್ಯೆ  ಸೂಚಿಸುತ್ತಿದೆ.
ಸರಕಾರ , ಮಾದ್ಯಮ, ಪೋಲಿಸರು, ವೈದ್ಯಕೀಯ ತಂಡ ಎಲ್ಲರೂ ಮನೆಯಲ್ಲೇ ಇರಲು ಸೂಚಿಸುತ್ತಿದ್ದಾರೆ. ಹೆದರುವ ಅಗತ್ಯವಿಲ್ಲದಿದ್ದರೂ  ಜಾಗೃತರಾಗುವತ್ತ ಗಮನ ಹರಿಸ ಬೇಕಾಗಿದೆ.  ಪ್ರಧಾನಮಂತ್ರಿ  ನರೇಂದ್ರ ಮೋದಿ ಯವರ  ಭಾರತ ಲಾಕ್ ಡೌನ್ ಕರೆಗೆ  ನಾವು ತಲೆ ಬಾಗಲೇ ಬೇಕು .     ನಮ್ಮ ದೇಶ , ನಮ್ಮ ಪರಿಸರ ,  ಜನತೆ‌ ಉಳಿಯ ಬೇಕಾದರೆ  ಈ ಲಾಕ್ ಡೌನ್ ಅಗತ್ಯ. ಜನತೆ ಇನ್ನೂ ಎಚ್ಚೆತ್ತು ಕೊಂಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಒಬ್ಬನೇ ಒಬ್ಬ ಎಚ್ಚರ ತಪ್ಪಿದರೂ ಕೊರೊನಾದ ಕಪಿಮುಷ್ಟಿಯಲ್ಲಿ  ಇಡೀ ಭಾರತವೇ ನಲುಗ ಬೇಕಾಗಿದೆ. ಈ ಸಂಘರ್ಷ ದಲ್ಲಿ ಗೆಲುವು ನಮ್ಮದೇ ಆಗಲಿ ಎಂಬ ನಿರೀಕ್ಷೆ ಯೊಂದಿಗೆ. 21 ದಿನಗಳ  ಸ್ಥಬ್ದ ಭಾರತ ಮತ್ತೆ ತನ್ನ ಕಂಟಕಗಳನ್ನು ನಿವಾರಿಸಿ  ಎದ್ದೇಳುವಾಗಹೊಸ ಭಾರತದ ಉದಯವಾಗಿರುತ್ತದೆ.
ಯುಗಾದಿ ಎಂದರೆ ನಮಗೆ ಹೊಸವರ್ಷ.  ಹೊಸ ಕನಸುಗಳು ,  ನಿರೀಕ್ಷೆಗಳು , ಎಲ್ಲವೂಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ.  ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ. ಆದರೆ ಬೆಲ್ಲವೇನೋ ಮನೆಯಲ್ಲಿ ಇರಬಹುದು ಬೇವು ಎಲ್ಲರಿಗೂ ಸಿಗುತ್ತದೋ ಇಲ್ಲವೋ. ಎನೇ ಇರಲಿ, ಇದ್ದರಲ್ಲಿ ಹಬ್ಬ ಮಾಡೋಣ. ಮುಂದಿನ ಬಾರಿಯ ಯುಗಾದಿಯನ್ನು ತುಂಬಾ ಖುಷಿಯಿಂದ ಕಳೆಯುವಂತಹ ಭವಿಷ್ಯ ನಮ್ಮದಾಗಲಿ.
ಯುಗಾದಿ ಹಬ್ಬದ ಶುಭಾಶಯಗಳು.
* ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

9 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

15 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago