ಅನುಕ್ರಮ

ಯುಗಾದಿ ಮತ್ತೆ ಬಂದಿದೆ | ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಯುಗಾದಿ ಹಬ್ಬದ ಶುಭಾಶಯಗಳು.

ಯುಗಾದಿ ಮತ್ತೆ ಬಂದಿದೆ. ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ. ಯುುಗಾದಿ

Advertisement
ಮುಂದಿನ ವರ್ಷ ವೂ ಬರುತ್ತದೆ. ಎಂದಿನಂತಲ್ಲ ಈ ಬಾರಿ ಯುಗಾದಿ. ಸಂಭ್ರಮಕ್ಕೊಂದು ಸೀಮಾ ರೇಖೆಯಿರಲಿ. ಈ ದಿನ ನಮ್ಮ ಮನೆಯಲ್ಲಿ ಏನಿದೆಯೋ ಅದರಲ್ಲೇ ಹಬ್ಬ ಮಾಡೋಣ. ಪ್ರತಿ ವರ್ಷ ದೇವಾಲಯಗಳಿಗೆ ಹೋಗುತ್ತಿದ್ದರೆ ಇಂದು ಮನೆಯಲ್ಲೇ ನಮಸ್ಕರಿಸೋಣ.  ನೈವೇದ್ಯ ಸಮರ್ಪಿಸೋಣ.  ದೇವರಿಗೆ ಗೊತ್ತಲ್ಲವೇ ಕೊರೊನಾ ರಕ್ಕಸ ತನ್ನ ಕಬಂಧಬಾಹುವಿನಲ್ಲಿ ಎಲ್ಲರನ್ನೂ ಆಪೋಷನ ತೆಗೆದು ಕೊಳ್ಳಲು ಕಾಯುತ್ತಿದ್ದಾನೆಂದು. ಎಲ್ಲಿ ಯಾವಾಗ ಬಲಿ ಸಿಗುತ್ತದೆಂದು,  ನಿಮಿಷ ನಿಮಿಷಕ್ಕೂ  ಹೆಚ್ಚುತ್ತಿರುವ  ಕೊರೊನಾ ಸೋಂಕಿತರ ಸಂಖ್ಯೆ  ಸೂಚಿಸುತ್ತಿದೆ.
ಸರಕಾರ , ಮಾದ್ಯಮ, ಪೋಲಿಸರು, ವೈದ್ಯಕೀಯ ತಂಡ ಎಲ್ಲರೂ ಮನೆಯಲ್ಲೇ ಇರಲು ಸೂಚಿಸುತ್ತಿದ್ದಾರೆ. ಹೆದರುವ ಅಗತ್ಯವಿಲ್ಲದಿದ್ದರೂ  ಜಾಗೃತರಾಗುವತ್ತ ಗಮನ ಹರಿಸ ಬೇಕಾಗಿದೆ.  ಪ್ರಧಾನಮಂತ್ರಿ  ನರೇಂದ್ರ ಮೋದಿ ಯವರ  ಭಾರತ ಲಾಕ್ ಡೌನ್ ಕರೆಗೆ  ನಾವು ತಲೆ ಬಾಗಲೇ ಬೇಕು .     ನಮ್ಮ ದೇಶ , ನಮ್ಮ ಪರಿಸರ ,  ಜನತೆ‌ ಉಳಿಯ ಬೇಕಾದರೆ  ಈ ಲಾಕ್ ಡೌನ್ ಅಗತ್ಯ. ಜನತೆ ಇನ್ನೂ ಎಚ್ಚೆತ್ತು ಕೊಂಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಒಬ್ಬನೇ ಒಬ್ಬ ಎಚ್ಚರ ತಪ್ಪಿದರೂ ಕೊರೊನಾದ ಕಪಿಮುಷ್ಟಿಯಲ್ಲಿ  ಇಡೀ ಭಾರತವೇ ನಲುಗ ಬೇಕಾಗಿದೆ. ಈ ಸಂಘರ್ಷ ದಲ್ಲಿ ಗೆಲುವು ನಮ್ಮದೇ ಆಗಲಿ ಎಂಬ ನಿರೀಕ್ಷೆ ಯೊಂದಿಗೆ. 21 ದಿನಗಳ  ಸ್ಥಬ್ದ ಭಾರತ ಮತ್ತೆ ತನ್ನ ಕಂಟಕಗಳನ್ನು ನಿವಾರಿಸಿ  ಎದ್ದೇಳುವಾಗಹೊಸ ಭಾರತದ ಉದಯವಾಗಿರುತ್ತದೆ.
ಯುಗಾದಿ ಎಂದರೆ ನಮಗೆ ಹೊಸವರ್ಷ.  ಹೊಸ ಕನಸುಗಳು ,  ನಿರೀಕ್ಷೆಗಳು , ಎಲ್ಲವೂಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ.  ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ. ಆದರೆ ಬೆಲ್ಲವೇನೋ ಮನೆಯಲ್ಲಿ ಇರಬಹುದು ಬೇವು ಎಲ್ಲರಿಗೂ ಸಿಗುತ್ತದೋ ಇಲ್ಲವೋ. ಎನೇ ಇರಲಿ, ಇದ್ದರಲ್ಲಿ ಹಬ್ಬ ಮಾಡೋಣ. ಮುಂದಿನ ಬಾರಿಯ ಯುಗಾದಿಯನ್ನು ತುಂಬಾ ಖುಷಿಯಿಂದ ಕಳೆಯುವಂತಹ ಭವಿಷ್ಯ ನಮ್ಮದಾಗಲಿ.
ಯುಗಾದಿ ಹಬ್ಬದ ಶುಭಾಶಯಗಳು.
* ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

6 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

8 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

9 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

15 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

22 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

22 hours ago