Advertisement
ಅನುಕ್ರಮ

ಯುಗಾದಿ ಮತ್ತೆ ಬಂದಿದೆ | ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ

Share
ಯುಗಾದಿ ಹಬ್ಬದ ಶುಭಾಶಯಗಳು.

ಯುಗಾದಿ ಮತ್ತೆ ಬಂದಿದೆ. ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ. ಯುುಗಾದಿ

ಮುಂದಿನ ವರ್ಷ ವೂ ಬರುತ್ತದೆ. ಎಂದಿನಂತಲ್ಲ ಈ ಬಾರಿ ಯುಗಾದಿ. ಸಂಭ್ರಮಕ್ಕೊಂದು ಸೀಮಾ ರೇಖೆಯಿರಲಿ. ಈ ದಿನ ನಮ್ಮ ಮನೆಯಲ್ಲಿ ಏನಿದೆಯೋ ಅದರಲ್ಲೇ ಹಬ್ಬ ಮಾಡೋಣ. ಪ್ರತಿ ವರ್ಷ ದೇವಾಲಯಗಳಿಗೆ ಹೋಗುತ್ತಿದ್ದರೆ ಇಂದು ಮನೆಯಲ್ಲೇ ನಮಸ್ಕರಿಸೋಣ.  ನೈವೇದ್ಯ ಸಮರ್ಪಿಸೋಣ.  ದೇವರಿಗೆ ಗೊತ್ತಲ್ಲವೇ ಕೊರೊನಾ ರಕ್ಕಸ ತನ್ನ ಕಬಂಧಬಾಹುವಿನಲ್ಲಿ ಎಲ್ಲರನ್ನೂ ಆಪೋಷನ ತೆಗೆದು ಕೊಳ್ಳಲು ಕಾಯುತ್ತಿದ್ದಾನೆಂದು. ಎಲ್ಲಿ ಯಾವಾಗ ಬಲಿ ಸಿಗುತ್ತದೆಂದು,  ನಿಮಿಷ ನಿಮಿಷಕ್ಕೂ  ಹೆಚ್ಚುತ್ತಿರುವ  ಕೊರೊನಾ ಸೋಂಕಿತರ ಸಂಖ್ಯೆ  ಸೂಚಿಸುತ್ತಿದೆ.
ಸರಕಾರ , ಮಾದ್ಯಮ, ಪೋಲಿಸರು, ವೈದ್ಯಕೀಯ ತಂಡ ಎಲ್ಲರೂ ಮನೆಯಲ್ಲೇ ಇರಲು ಸೂಚಿಸುತ್ತಿದ್ದಾರೆ. ಹೆದರುವ ಅಗತ್ಯವಿಲ್ಲದಿದ್ದರೂ  ಜಾಗೃತರಾಗುವತ್ತ ಗಮನ ಹರಿಸ ಬೇಕಾಗಿದೆ.  ಪ್ರಧಾನಮಂತ್ರಿ  ನರೇಂದ್ರ ಮೋದಿ ಯವರ  ಭಾರತ ಲಾಕ್ ಡೌನ್ ಕರೆಗೆ  ನಾವು ತಲೆ ಬಾಗಲೇ ಬೇಕು .     ನಮ್ಮ ದೇಶ , ನಮ್ಮ ಪರಿಸರ ,  ಜನತೆ‌ ಉಳಿಯ ಬೇಕಾದರೆ  ಈ ಲಾಕ್ ಡೌನ್ ಅಗತ್ಯ. ಜನತೆ ಇನ್ನೂ ಎಚ್ಚೆತ್ತು ಕೊಂಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಒಬ್ಬನೇ ಒಬ್ಬ ಎಚ್ಚರ ತಪ್ಪಿದರೂ ಕೊರೊನಾದ ಕಪಿಮುಷ್ಟಿಯಲ್ಲಿ  ಇಡೀ ಭಾರತವೇ ನಲುಗ ಬೇಕಾಗಿದೆ. ಈ ಸಂಘರ್ಷ ದಲ್ಲಿ ಗೆಲುವು ನಮ್ಮದೇ ಆಗಲಿ ಎಂಬ ನಿರೀಕ್ಷೆ ಯೊಂದಿಗೆ. 21 ದಿನಗಳ  ಸ್ಥಬ್ದ ಭಾರತ ಮತ್ತೆ ತನ್ನ ಕಂಟಕಗಳನ್ನು ನಿವಾರಿಸಿ  ಎದ್ದೇಳುವಾಗಹೊಸ ಭಾರತದ ಉದಯವಾಗಿರುತ್ತದೆ.
ಯುಗಾದಿ ಎಂದರೆ ನಮಗೆ ಹೊಸವರ್ಷ.  ಹೊಸ ಕನಸುಗಳು ,  ನಿರೀಕ್ಷೆಗಳು , ಎಲ್ಲವೂಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ.  ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ. ಆದರೆ ಬೆಲ್ಲವೇನೋ ಮನೆಯಲ್ಲಿ ಇರಬಹುದು ಬೇವು ಎಲ್ಲರಿಗೂ ಸಿಗುತ್ತದೋ ಇಲ್ಲವೋ. ಎನೇ ಇರಲಿ, ಇದ್ದರಲ್ಲಿ ಹಬ್ಬ ಮಾಡೋಣ. ಮುಂದಿನ ಬಾರಿಯ ಯುಗಾದಿಯನ್ನು ತುಂಬಾ ಖುಷಿಯಿಂದ ಕಳೆಯುವಂತಹ ಭವಿಷ್ಯ ನಮ್ಮದಾಗಲಿ.
ಯುಗಾದಿ ಹಬ್ಬದ ಶುಭಾಶಯಗಳು.
* ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

16 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

23 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago