Advertisement
ಅನುಕ್ರಮ

ಯುಗಾದಿ ಮತ್ತೆ ಬಂದಿದೆ | ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ

Share
ಯುಗಾದಿ ಹಬ್ಬದ ಶುಭಾಶಯಗಳು.

ಯುಗಾದಿ ಮತ್ತೆ ಬಂದಿದೆ. ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ. ಯುುಗಾದಿ

ಮುಂದಿನ ವರ್ಷ ವೂ ಬರುತ್ತದೆ. ಎಂದಿನಂತಲ್ಲ ಈ ಬಾರಿ ಯುಗಾದಿ. ಸಂಭ್ರಮಕ್ಕೊಂದು ಸೀಮಾ ರೇಖೆಯಿರಲಿ. ಈ ದಿನ ನಮ್ಮ ಮನೆಯಲ್ಲಿ ಏನಿದೆಯೋ ಅದರಲ್ಲೇ ಹಬ್ಬ ಮಾಡೋಣ. ಪ್ರತಿ ವರ್ಷ ದೇವಾಲಯಗಳಿಗೆ ಹೋಗುತ್ತಿದ್ದರೆ ಇಂದು ಮನೆಯಲ್ಲೇ ನಮಸ್ಕರಿಸೋಣ.  ನೈವೇದ್ಯ ಸಮರ್ಪಿಸೋಣ.  ದೇವರಿಗೆ ಗೊತ್ತಲ್ಲವೇ ಕೊರೊನಾ ರಕ್ಕಸ ತನ್ನ ಕಬಂಧಬಾಹುವಿನಲ್ಲಿ ಎಲ್ಲರನ್ನೂ ಆಪೋಷನ ತೆಗೆದು ಕೊಳ್ಳಲು ಕಾಯುತ್ತಿದ್ದಾನೆಂದು. ಎಲ್ಲಿ ಯಾವಾಗ ಬಲಿ ಸಿಗುತ್ತದೆಂದು,  ನಿಮಿಷ ನಿಮಿಷಕ್ಕೂ  ಹೆಚ್ಚುತ್ತಿರುವ  ಕೊರೊನಾ ಸೋಂಕಿತರ ಸಂಖ್ಯೆ  ಸೂಚಿಸುತ್ತಿದೆ.
ಸರಕಾರ , ಮಾದ್ಯಮ, ಪೋಲಿಸರು, ವೈದ್ಯಕೀಯ ತಂಡ ಎಲ್ಲರೂ ಮನೆಯಲ್ಲೇ ಇರಲು ಸೂಚಿಸುತ್ತಿದ್ದಾರೆ. ಹೆದರುವ ಅಗತ್ಯವಿಲ್ಲದಿದ್ದರೂ  ಜಾಗೃತರಾಗುವತ್ತ ಗಮನ ಹರಿಸ ಬೇಕಾಗಿದೆ.  ಪ್ರಧಾನಮಂತ್ರಿ  ನರೇಂದ್ರ ಮೋದಿ ಯವರ  ಭಾರತ ಲಾಕ್ ಡೌನ್ ಕರೆಗೆ  ನಾವು ತಲೆ ಬಾಗಲೇ ಬೇಕು .     ನಮ್ಮ ದೇಶ , ನಮ್ಮ ಪರಿಸರ ,  ಜನತೆ‌ ಉಳಿಯ ಬೇಕಾದರೆ  ಈ ಲಾಕ್ ಡೌನ್ ಅಗತ್ಯ. ಜನತೆ ಇನ್ನೂ ಎಚ್ಚೆತ್ತು ಕೊಂಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಒಬ್ಬನೇ ಒಬ್ಬ ಎಚ್ಚರ ತಪ್ಪಿದರೂ ಕೊರೊನಾದ ಕಪಿಮುಷ್ಟಿಯಲ್ಲಿ  ಇಡೀ ಭಾರತವೇ ನಲುಗ ಬೇಕಾಗಿದೆ. ಈ ಸಂಘರ್ಷ ದಲ್ಲಿ ಗೆಲುವು ನಮ್ಮದೇ ಆಗಲಿ ಎಂಬ ನಿರೀಕ್ಷೆ ಯೊಂದಿಗೆ. 21 ದಿನಗಳ  ಸ್ಥಬ್ದ ಭಾರತ ಮತ್ತೆ ತನ್ನ ಕಂಟಕಗಳನ್ನು ನಿವಾರಿಸಿ  ಎದ್ದೇಳುವಾಗಹೊಸ ಭಾರತದ ಉದಯವಾಗಿರುತ್ತದೆ.
ಯುಗಾದಿ ಎಂದರೆ ನಮಗೆ ಹೊಸವರ್ಷ.  ಹೊಸ ಕನಸುಗಳು ,  ನಿರೀಕ್ಷೆಗಳು , ಎಲ್ಲವೂಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ.  ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ. ಆದರೆ ಬೆಲ್ಲವೇನೋ ಮನೆಯಲ್ಲಿ ಇರಬಹುದು ಬೇವು ಎಲ್ಲರಿಗೂ ಸಿಗುತ್ತದೋ ಇಲ್ಲವೋ. ಎನೇ ಇರಲಿ, ಇದ್ದರಲ್ಲಿ ಹಬ್ಬ ಮಾಡೋಣ. ಮುಂದಿನ ಬಾರಿಯ ಯುಗಾದಿಯನ್ನು ತುಂಬಾ ಖುಷಿಯಿಂದ ಕಳೆಯುವಂತಹ ಭವಿಷ್ಯ ನಮ್ಮದಾಗಲಿ.
ಯುಗಾದಿ ಹಬ್ಬದ ಶುಭಾಶಯಗಳು.
* ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

5 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

13 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

20 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago