ಸುಳ್ಯ: ಕುಮಾರವ್ಯಾಸ ಮಹಾ ಕವಿ ವ್ಯಾಸ ಭಾರತದಿಂದ ವಸ್ತುವನ್ನು ಸ್ವೀಕರಿಸಿದರೂ ಬರವಣಿಗೆಯಲ್ಲಿ ಸ್ವತಂತ್ರತೆಯನ್ನು ರೂಢಿಸಿಕೊಂಡ ಪ್ರತಿಭಾಶಾಲಿ. ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಪಾತ್ರಗಳಿಗೆ ಜೀವಂತಿಕೆ ತುಂಬಿದ್ದಾನೆ. ಪಾತ್ರದ ವಿಶೇಷತೆಗೆ ತಕ್ಕಂತೆ ವಸ್ತುವಿನ ವೈವಿಧ್ಯಕ್ಕೆ ಹೊಂದುವಂತೆ ಮಹತ್ವದ ಕೃತಿಯನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾನೆ. ” ಎಂದು ಖ್ಯಾತ ಯಕ್ಷಗಾನ ಅರ್ಥದಾರಿ ಶ್ರೀ ವೆಂಕಟ್ರಾಮ ಭಟ್ ಸುಳ್ಯ ಅವರು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಕನ್ನಡ ವಿಭಾಗದಿಂದ ಆಯೋಜಿಸಲಾದ ಕುಮಾರ ವ್ಯಾಸ ಭಾರತ ಕೃತಿಯ ಆಯ್ದ ಭಾಗದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಕು. ಬೇಬಿ ವಿದ್ಯಾ ಪ್ರಸ್ತಾವನೆ ಗೈದು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಸಾಯಿ ಸಜನ್ ಸ್ವಾಗತಿಸಿ, ಶ್ರವಣ್ ವಂದಿಸಿದರು. ಯಜ್ನೇಶ್ ಕಾರ್ಯಕ್ರಮ ನಿರ್ವಹಿಸಿದರು.
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…