ಸುಳ್ಯ: ಕುಮಾರವ್ಯಾಸ ಮಹಾ ಕವಿ ವ್ಯಾಸ ಭಾರತದಿಂದ ವಸ್ತುವನ್ನು ಸ್ವೀಕರಿಸಿದರೂ ಬರವಣಿಗೆಯಲ್ಲಿ ಸ್ವತಂತ್ರತೆಯನ್ನು ರೂಢಿಸಿಕೊಂಡ ಪ್ರತಿಭಾಶಾಲಿ. ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಪಾತ್ರಗಳಿಗೆ ಜೀವಂತಿಕೆ ತುಂಬಿದ್ದಾನೆ. ಪಾತ್ರದ ವಿಶೇಷತೆಗೆ ತಕ್ಕಂತೆ ವಸ್ತುವಿನ ವೈವಿಧ್ಯಕ್ಕೆ ಹೊಂದುವಂತೆ ಮಹತ್ವದ ಕೃತಿಯನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾನೆ. ” ಎಂದು ಖ್ಯಾತ ಯಕ್ಷಗಾನ ಅರ್ಥದಾರಿ ಶ್ರೀ ವೆಂಕಟ್ರಾಮ ಭಟ್ ಸುಳ್ಯ ಅವರು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಕನ್ನಡ ವಿಭಾಗದಿಂದ ಆಯೋಜಿಸಲಾದ ಕುಮಾರ ವ್ಯಾಸ ಭಾರತ ಕೃತಿಯ ಆಯ್ದ ಭಾಗದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಕು. ಬೇಬಿ ವಿದ್ಯಾ ಪ್ರಸ್ತಾವನೆ ಗೈದು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಸಾಯಿ ಸಜನ್ ಸ್ವಾಗತಿಸಿ, ಶ್ರವಣ್ ವಂದಿಸಿದರು. ಯಜ್ನೇಶ್ ಕಾರ್ಯಕ್ರಮ ನಿರ್ವಹಿಸಿದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…