Advertisement
ನಮ್ಮೂರ ಸುದ್ದಿ

ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಕುಮಾರವ್ಯಾಸ

Share

ಸುಳ್ಯ: ಕುಮಾರವ್ಯಾಸ ಮಹಾ ಕವಿ ವ್ಯಾಸ ಭಾರತದಿಂದ ವಸ್ತುವನ್ನು ಸ್ವೀಕರಿಸಿದರೂ ಬರವಣಿಗೆಯಲ್ಲಿ ಸ್ವತಂತ್ರತೆಯನ್ನು ರೂಢಿಸಿಕೊಂಡ ಪ್ರತಿಭಾಶಾಲಿ. ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಪಾತ್ರಗಳಿಗೆ ಜೀವಂತಿಕೆ ತುಂಬಿದ್ದಾನೆ. ಪಾತ್ರದ ವಿಶೇಷತೆಗೆ ತಕ್ಕಂತೆ ವಸ್ತುವಿನ ವೈವಿಧ್ಯಕ್ಕೆ ಹೊಂದುವಂತೆ ಮಹತ್ವದ ಕೃತಿಯನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾನೆ. ” ಎಂದು ಖ್ಯಾತ ಯಕ್ಷಗಾನ ಅರ್ಥದಾರಿ ಶ್ರೀ ವೆಂಕಟ್ರಾಮ ಭಟ್ ಸುಳ್ಯ ಅವರು ಹೇಳಿದರು.

ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಕನ್ನಡ ವಿಭಾಗದಿಂದ ಆಯೋಜಿಸಲಾದ ಕುಮಾರ ವ್ಯಾಸ ಭಾರತ ಕೃತಿಯ ಆಯ್ದ ಭಾಗದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ  ಹರಿಣಿ ಪುತ್ತೂರಾಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಕು. ಬೇಬಿ ವಿದ್ಯಾ ಪ್ರಸ್ತಾವನೆ ಗೈದು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಸಾಯಿ ಸಜನ್ ಸ್ವಾಗತಿಸಿ, ಶ್ರವಣ್ ವಂದಿಸಿದರು. ಯಜ್ನೇಶ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

23 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

23 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago