ಸುಳ್ಯ: ಕುಮಾರವ್ಯಾಸ ಮಹಾ ಕವಿ ವ್ಯಾಸ ಭಾರತದಿಂದ ವಸ್ತುವನ್ನು ಸ್ವೀಕರಿಸಿದರೂ ಬರವಣಿಗೆಯಲ್ಲಿ ಸ್ವತಂತ್ರತೆಯನ್ನು ರೂಢಿಸಿಕೊಂಡ ಪ್ರತಿಭಾಶಾಲಿ. ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಪಾತ್ರಗಳಿಗೆ ಜೀವಂತಿಕೆ ತುಂಬಿದ್ದಾನೆ. ಪಾತ್ರದ ವಿಶೇಷತೆಗೆ ತಕ್ಕಂತೆ ವಸ್ತುವಿನ ವೈವಿಧ್ಯಕ್ಕೆ ಹೊಂದುವಂತೆ ಮಹತ್ವದ ಕೃತಿಯನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾನೆ. ” ಎಂದು ಖ್ಯಾತ ಯಕ್ಷಗಾನ ಅರ್ಥದಾರಿ ಶ್ರೀ ವೆಂಕಟ್ರಾಮ ಭಟ್ ಸುಳ್ಯ ಅವರು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಕನ್ನಡ ವಿಭಾಗದಿಂದ ಆಯೋಜಿಸಲಾದ ಕುಮಾರ ವ್ಯಾಸ ಭಾರತ ಕೃತಿಯ ಆಯ್ದ ಭಾಗದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಕು. ಬೇಬಿ ವಿದ್ಯಾ ಪ್ರಸ್ತಾವನೆ ಗೈದು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಸಾಯಿ ಸಜನ್ ಸ್ವಾಗತಿಸಿ, ಶ್ರವಣ್ ವಂದಿಸಿದರು. ಯಜ್ನೇಶ್ ಕಾರ್ಯಕ್ರಮ ನಿರ್ವಹಿಸಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…