Advertisement
ಸುದ್ದಿಗಳು

ಯುನೈಟೆಡ್‌ ಎಂಪವರ್ಮೆಂಟ್ ಎಸೋಸಿಯೇಶನ್ ಜಿಲ್ಲಾದ್ಯಕ್ಷರಾಗಿ ಅನ್ಸಾರ್ ಬೆಳ್ಳಾರೆ ನೇಮಕ

Share

ಸುಳ್ಯ: ಕ್ರೀಡಾ ಕ್ಷೇತ್ರದಲ್ಲಿ ಸಾಧಕರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವುದು ಹಾಗೂ ಕ್ರೀಡಾ ಕ್ಷೇತ್ರಕ್ಕೆ ಸಂಭಂದಿಸಿದಂತೆ ಹಲವಾರು ಉದ್ದೇಶಗಳನ್ನಿಟ್ಟು ರಾಜ್ಯಮಟ್ಟದಲ್ಲಿ ಸ್ಥಾಪನೆಗೊಂಡ ಯುನೈಟೆಡ್‌ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಸುಳ್ಯ ಜಿಲ್ಲಾ ಘಟಕವನ್ನು ನ.29 ರಂದು ಅಸ್ತಿತ್ವಕ್ಕೆ ತರಲಾಯಿತು.

ಕಲಂದರ್ ಎಲಿಮಲೆ

ನಗರದ ಮೆಕ್ಸಿಕೊ ಸಭಾಂಗಣದಲ್ಲಿ ಯುನೈಟೆಡ್ ಎಂಪವರ್ಮೆಂಟ್ ಎಸೋಸಿಯೇಶನ್ ಸುಳ್ಯ ಜಿಲ್ಲಾ ಘಟಕದ ಅದ್ಯಕ್ಷರಾಗಿ ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯಯಾದ ಎಂ ಫ್ರೆಂಡ್ಸ್ ಸದಸ್ಯರು, ಪ್ರಮುಖ ಸಂಘಟಕರು, ನ್ಯೂ ಫ್ಲಾಷ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಬೆಳ್ಳಾರೆ ಮತ್ತು ಜೈ ಭಾರತ್ ಸ್ಪೋರ್ಟ್ಸ್ ಕ್ಲಬ್ ಬೆಳ್ಳಾರೆ ಇದರ ಸಕ್ರಿಯ ಸದಸ್ಯರೂ, ಬರಹಗಾರರೂ , ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ಮಾಜಿ ಸದಸ್ಯರೂ ಆಗಿರುವ ಅನ್ಸಾರ್ ಬೆಳ್ಳಾರೆಯವರನ್ನು ನೇಮಿಸಲಾಯಿತು.

ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ್ ಗೊಳ್ತಮಜಲು ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸ್ಥೆಯ ಧ್ಯೇಯ ಉದ್ದೇಶದ ಸಂಪೂರ್ಣ ಮಾಹಿತಿಯನ್ನು ನೀಡಿದರು.
ರಾಜ್ಯ ಸಮಿತಿ ಸದಸ್ಯ ಇಬ್ರಾಹಿಂ ಗೋಳಿಕಟ್ಟೆ ಪ್ರಸ್ತಾವಿಕ ಮಾತನಾಡಿದರು. ಸುಳ್ಯ ಸಮಿತಿ ರಚನೆ ಉಸ್ತುವಾರಿ ಸಿರಾಜ್, ಇಕ್ಬಾಲ್ ಹಸನ್, ಪಾರೂಕ್ ಪುತ್ತೂರು, ಶರೀಫ್ ಪುತ್ತೂರುರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ ಘಟಕಕ್ಕೆ ಅಧ್ಯಕ್ಷರಾಗಿ ಅನ್ಸಾರ್ ಬೆಳ್ಳಾರೆ, ಉಪಾಧ್ಯಕ್ಷರಾಗಿ ಆರ್ ಬಿ ಬಶೀರ್, ರಶೀದ್ ಜಟ್ಟಿಪಳ್ಳ ಕೋಶಾಧಿಕಾರಿಯಾಗಿ ಹಂಝ ಕಾತೂನ್ , ಪ್ರ. ಕಾರ್ಯದರ್ಶಿಯಾಗಿ ಕಲಂದರ್ ಎಲಿಮಲೆ, ಜೊತೆ ಕಾರ್ಯದರ್ಶಿ ಶಫೀಕ್ ಕೊಂಯಿಗಾಜೆ, ಬಶೀರ್ ಬೆಳ್ಳಾರೆಯವರನ್ನು ನೇಮಿಸಲಾಯಿತು. ಕ್ರೀಡಾ ಕನ್ವವಿನರಾಗಿ ಝಾಕೀರ್ ಡಿ ಎಂ, ಕ್ರೀಡಾ ಕಾರ್ಯದರ್ಶಿ ಉಸ್ಮಾನ್ ಜಯನಗರ, ಬಾತೀಶ ಗಾಂಧಿನಗರ, ಕ್ರಿಕೆಟ್ ಸಂಯೋಜಕರಾಗಿ ಅನ್ಸಾಫ್ ಬೆಳ್ಳಾರೆ, ವಾಲಿಬಾಲ್ ತಾಜುದ್ದೀನ್ ಅಜ್ಜಾವರ, ಪುಟ್ಬಾಲ್ ಮುನಾಫರ್, ಫರೀದ್ ಶಿಲ್ಪಾ, ಕಬಡ್ಡಿ ಸಿರಾಜುದ್ದೀನ್‌ ಪೈಚಾರ್, ಸಂಶುದ್ದೀನ್ ಕೆ.ಎಂ, ಶಟ್ಲ್ ಬ್ಯಾಡ್ಮಿಂಟನ್ ಅಬ್ದುಲ್ ಖಾದರ್ ಜನಪ್ರಿಯ ಇವರನ್ನು ನೇಮಿಸಿದರೆ, ಇತರ ಕ್ರೀಡೆಗಳಿಗೆ ರಫೀಕ್ ಬಿಎಂಎ, ಯಹ್ಯಾ ಬೆಳ್ಳಾರೆ, ನಾಸೀರ್ ಬಾರ್ಪಣೆಯವರನ್ನುಆಯ್ಕೆಮಾಡಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯರಾದ ತಾಜುದ್ದೀನ್ ಸ್ವಾಗತಿಸಿ ಶರೀಫ್ ಕಂಠಿ ವಂದಿಸಿದರು. ಪತ್ರಕರ್ತ ಶರೀಫ್ ಜಟ್ಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

17 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

20 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

20 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

24 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago