Advertisement
ಸುದ್ದಿಗಳು

ಯುಪಿಎಲ್ ಹರಾಜು ಪ್ರಕ್ರಿಯೆ ಅಂತ್ಯ, ಫೆ.18 ರಂದು ಪಂದ್ಯಾವಳಿ

Share

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರಿನ ಪ್ರತಿಷ್ಠಿತ ಯುನಿವರ್ಸಿಟಿ ಪ್ರೀಮಿಯರ್ ಲೀಗ್ (ಯುಪಿಎಲ್) ಚುಟುಕು ಕ್ರಿಕೆಟ್ ಪಂದ್ಯಾವಳಿಯ ಹರಾಜು ಪ್ರಕ್ರಿಯೆ ಮಂಗಳವಾರ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಿತು.

ಯುಪಿಎಲ್ ಕ್ರಿಕೆಟ್ ಪಂದ್ಯಾವಳಿಯು ವಿವಿ ಕಾಲೇಜಿನ ಕ್ರೀಡಾಂಗಣದಲ್ಲಿ ಇದೇ ಫೆಬ್ರವರಿ 18 ರಂದು ಬೆಳಗ್ಗೆ 9 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ. ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ ಪ್ರಾಂಶುಪಾಲ ಡಾ ಉದಯ ಕುಮಾರ್ ಎಂ.ಎ, ಯುಪಿಎಲ್ ಪಂದ್ಯಾವಳಿಯು ಕಾಲೇಜಿನ ಉಳಿದ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿರಲಿ ಎಂದು ಶುಭಹಾರೈಸಿದರು.

ಪಂದ್ಯವಳಿಯಲ್ಲಿ 2 ವಿದ್ಯಾರ್ಥಿನಿಯರ ತಂಡ ಸೇರಿದಂತೆ, ಒಟ್ಟು 8 ತಂಡಗಳು ಭಾಗವಹಿಸಲಿವೆ. ತಂಡಗಳನ್ನು ಯುಸಿಎಮ್ ವಾರಿಯರ್ಸ್ , ಯುಸಿಎಮ್ ಬ್ರಿಗೇಡ್, ಯುಸಿಎಮ್ ಜಾಗ್ವಾರ್ಸ್, ಯುಸಿಎಮ್ ಇಲವೆನ್ಸ್, ಯುಸಿಎಮ್ ಸ್ಟ್ರೈಕರ್ಸ್, ಯುಸಿಎಮ್ ರಾಯಲ್ಸ್, ಯುಸಿಎಮ್ ಪಿಂಕ್ ಪ್ಯಾಂಥರ್ಸ್ ಹಾಗೂ ಯುಸಿಎಮ್ ಬ್ಲೂ ಏಂಜೆಲ್ಸ್. ಪ್ರತಿಯೊಂದು ತಂಡಕ್ಕೂ ಪ್ರಾಧ್ಯಾಪಕರು ಮಾಲೀಕರಾಗಿರುತ್ತಾರೆ ಮತ್ತು ಪ್ರತಿ 6 ವಿದ್ಯಾರ್ಥಿಗಳ ತಂಡದಲ್ಲೂ ಒಬ್ಬರು ಪ್ರಾಧ್ಯಾಪಕರು ಆಡಲಿದ್ದಾರೆ.

ಹರಾಜು ಪ್ರಕ್ರಿಯೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ಉಪ ನಿರ್ದೇಶಕ ಡಾ. ಕೇಶವಮೂರ್ತಿ, ವಿದ್ಯಾರ್ಥಿ ಸಂಘದ ನಾಯಕ ಸಂಪತ್ ಬಿ ಮತ್ತು ಕ್ರೀಡಾ ಕಾರ್ಯದರ್ಶಿ ಮನೀಶ್ ಕುಮಾರ್ ಹಾಗೂ ಕಾವ್ಯಾ, ಮತ್ತು ತಂಡಗಳ ಮಾಲೀಕರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

27 minutes ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

40 minutes ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

1 hour ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

1 hour ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

10 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

12 hours ago