Advertisement
ಸುದ್ದಿಗಳು

ಯುವಕರು ನವಭಾರತದ ನಿರ್ಮಾಣಕ್ಕೆ ಸಹಕರಿಸಬೇಕು – ತೇಜಸ್ವಿ ಸೂರ್ಯ

Share

ಪುತ್ತೂರು:ಭಾರತವು ಒಂದು ಬದಲಾವಣೆಯ ಕಾಲಘಟ್ಟದಲ್ಲಿ ಬಂದು ನಿಂತಿದೆ. ನವ ಭಾರತದ ನಿರ್ಮಾಣಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅದರಲ್ಲಿ ಇಂದಿನ ಯುವಜನತೆ ನವಭಾರತದ ನಿರ್ಮಾಣಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಯುವ ಸಂಸದ  ತೇಜಸ್ವಿ ಸೂರ್ಯ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಕಾಲೇಜಿನ ಸಹಯೋಗದಲ್ಲಿ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆದ ‘ಯೂತ್-ವಿಷನ್-ನೇಶನ್’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಅನೇಕ ಒಳ್ಳೆಯ ಬದಲಾವಣೆಗಳು ಆಗುತ್ತಿವೆ. ಸ್ವಚ್ಛ ಭಾರತದಂತಹ ಪರಿಕಲ್ಪನೆಗಳು ದೇಶದಲ್ಲಿ ಕ್ರಾಂತಿಯನ್ನು ಉಂಟುಮಾಡುತ್ತಿವೆ. ನರೇಂದ್ರ ಮೋದಿಯವರ ಇಂತಹ ಅನೇಕ ಯೋಜನೆಗಳು ದೇಶದಲ್ಲಿ ಬದಲಾವಣೆಯನ್ನು ತರುತ್ತಿದೆ.ಆದ್ದರಿಂದ ಯುವಜನತೆ ಈ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.ಆಗ ಮಾತ್ರದೇಶ ಸದೃಢವಾಗಲು ಸಾಧ್ಯಎಂದರು. ಕಾಶ್ಮೀರದಲ್ಲಿ ಜಾರಿಯಲ್ಲಿ ಇದ್ದ ಸಾಂವಿಧಾನಿಕ 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ಮತ್ತೊಂದು ಬದಲಾವಣೆಯನ್ನು ಕೇಂದ್ರ ಸರಕಾರ ಮಾಡಿದೆ.ಇದರಿಂದ ಕಾಶ್ಮೀರದಲ್ಲಿ ಅಬಿವೃದ್ದಿಯ ಪಥ ಶುರುವಾಗಿದೆ.ಇತಿಹಾಸದ ಅನೇಕ ತಪ್ಪುಗಳಿಂದಾಗಿ 370ನೇ ವಿಧಿ ಶುರುವಾಯಿತು. ಅದರಅಂತ್ಯವಾಗಿದೆ. ಎಂದು ಹೇಳಿ 370ನೇ ವಿಧಿಯಕುರಿತು ಸವಿವರವಾಗಿ ಮಾಹಿತಿ ನೀಡಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ.ಎಂ.ಕೃಷ್ಣ ಭಟ್‍ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಕಾಲೇಜಿನ ಅಧ್ಯಕ್ಷರಾದ ಗಣೇಶ್‍ಜೋಷಿ, ಸಂಚಾಲಕರಾದ ವಿಜಯನಾರಾಯಣ ಕೆ.ಎಂ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ  ಅರವಿಂದ್ ವಳಕಟ್ಟೆ ಸ್ವಾಗತಿಸಿ, ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ.ರವೀಂದ್ರ ವಂದಿಸಿದರು. ಕಾನೂನು ಕಾಲೇಜಿನ ಉಪನ್ಯಾಸಕರಾದ  ಕುಮಾರ್‍ಎಸ್. ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

49 minutes ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago