Advertisement
ಸುದ್ದಿಗಳು

ಯುವಕರು ನವಭಾರತದ ನಿರ್ಮಾಣಕ್ಕೆ ಸಹಕರಿಸಬೇಕು – ತೇಜಸ್ವಿ ಸೂರ್ಯ

Share

ಪುತ್ತೂರು:ಭಾರತವು ಒಂದು ಬದಲಾವಣೆಯ ಕಾಲಘಟ್ಟದಲ್ಲಿ ಬಂದು ನಿಂತಿದೆ. ನವ ಭಾರತದ ನಿರ್ಮಾಣಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅದರಲ್ಲಿ ಇಂದಿನ ಯುವಜನತೆ ನವಭಾರತದ ನಿರ್ಮಾಣಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಯುವ ಸಂಸದ  ತೇಜಸ್ವಿ ಸೂರ್ಯ ಹೇಳಿದರು.

Advertisement
Advertisement
Advertisement
Advertisement

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಕಾಲೇಜಿನ ಸಹಯೋಗದಲ್ಲಿ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆದ ‘ಯೂತ್-ವಿಷನ್-ನೇಶನ್’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಅನೇಕ ಒಳ್ಳೆಯ ಬದಲಾವಣೆಗಳು ಆಗುತ್ತಿವೆ. ಸ್ವಚ್ಛ ಭಾರತದಂತಹ ಪರಿಕಲ್ಪನೆಗಳು ದೇಶದಲ್ಲಿ ಕ್ರಾಂತಿಯನ್ನು ಉಂಟುಮಾಡುತ್ತಿವೆ. ನರೇಂದ್ರ ಮೋದಿಯವರ ಇಂತಹ ಅನೇಕ ಯೋಜನೆಗಳು ದೇಶದಲ್ಲಿ ಬದಲಾವಣೆಯನ್ನು ತರುತ್ತಿದೆ.ಆದ್ದರಿಂದ ಯುವಜನತೆ ಈ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.ಆಗ ಮಾತ್ರದೇಶ ಸದೃಢವಾಗಲು ಸಾಧ್ಯಎಂದರು. ಕಾಶ್ಮೀರದಲ್ಲಿ ಜಾರಿಯಲ್ಲಿ ಇದ್ದ ಸಾಂವಿಧಾನಿಕ 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ಮತ್ತೊಂದು ಬದಲಾವಣೆಯನ್ನು ಕೇಂದ್ರ ಸರಕಾರ ಮಾಡಿದೆ.ಇದರಿಂದ ಕಾಶ್ಮೀರದಲ್ಲಿ ಅಬಿವೃದ್ದಿಯ ಪಥ ಶುರುವಾಗಿದೆ.ಇತಿಹಾಸದ ಅನೇಕ ತಪ್ಪುಗಳಿಂದಾಗಿ 370ನೇ ವಿಧಿ ಶುರುವಾಯಿತು. ಅದರಅಂತ್ಯವಾಗಿದೆ. ಎಂದು ಹೇಳಿ 370ನೇ ವಿಧಿಯಕುರಿತು ಸವಿವರವಾಗಿ ಮಾಹಿತಿ ನೀಡಿದರು.

Advertisement

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ.ಎಂ.ಕೃಷ್ಣ ಭಟ್‍ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಕಾಲೇಜಿನ ಅಧ್ಯಕ್ಷರಾದ ಗಣೇಶ್‍ಜೋಷಿ, ಸಂಚಾಲಕರಾದ ವಿಜಯನಾರಾಯಣ ಕೆ.ಎಂ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ  ಅರವಿಂದ್ ವಳಕಟ್ಟೆ ಸ್ವಾಗತಿಸಿ, ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ.ರವೀಂದ್ರ ವಂದಿಸಿದರು. ಕಾನೂನು ಕಾಲೇಜಿನ ಉಪನ್ಯಾಸಕರಾದ  ಕುಮಾರ್‍ಎಸ್. ಕಾರ್ಯಕ್ರಮ ನಿರೂಪಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

3 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

4 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

4 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago