Advertisement
ಸುದ್ದಿಗಳು

ಯುವಕರು ನವಭಾರತದ ನಿರ್ಮಾಣಕ್ಕೆ ಸಹಕರಿಸಬೇಕು – ತೇಜಸ್ವಿ ಸೂರ್ಯ

Share

ಪುತ್ತೂರು:ಭಾರತವು ಒಂದು ಬದಲಾವಣೆಯ ಕಾಲಘಟ್ಟದಲ್ಲಿ ಬಂದು ನಿಂತಿದೆ. ನವ ಭಾರತದ ನಿರ್ಮಾಣಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅದರಲ್ಲಿ ಇಂದಿನ ಯುವಜನತೆ ನವಭಾರತದ ನಿರ್ಮಾಣಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಯುವ ಸಂಸದ  ತೇಜಸ್ವಿ ಸೂರ್ಯ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಕಾಲೇಜಿನ ಸಹಯೋಗದಲ್ಲಿ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆದ ‘ಯೂತ್-ವಿಷನ್-ನೇಶನ್’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಅನೇಕ ಒಳ್ಳೆಯ ಬದಲಾವಣೆಗಳು ಆಗುತ್ತಿವೆ. ಸ್ವಚ್ಛ ಭಾರತದಂತಹ ಪರಿಕಲ್ಪನೆಗಳು ದೇಶದಲ್ಲಿ ಕ್ರಾಂತಿಯನ್ನು ಉಂಟುಮಾಡುತ್ತಿವೆ. ನರೇಂದ್ರ ಮೋದಿಯವರ ಇಂತಹ ಅನೇಕ ಯೋಜನೆಗಳು ದೇಶದಲ್ಲಿ ಬದಲಾವಣೆಯನ್ನು ತರುತ್ತಿದೆ.ಆದ್ದರಿಂದ ಯುವಜನತೆ ಈ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.ಆಗ ಮಾತ್ರದೇಶ ಸದೃಢವಾಗಲು ಸಾಧ್ಯಎಂದರು. ಕಾಶ್ಮೀರದಲ್ಲಿ ಜಾರಿಯಲ್ಲಿ ಇದ್ದ ಸಾಂವಿಧಾನಿಕ 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ಮತ್ತೊಂದು ಬದಲಾವಣೆಯನ್ನು ಕೇಂದ್ರ ಸರಕಾರ ಮಾಡಿದೆ.ಇದರಿಂದ ಕಾಶ್ಮೀರದಲ್ಲಿ ಅಬಿವೃದ್ದಿಯ ಪಥ ಶುರುವಾಗಿದೆ.ಇತಿಹಾಸದ ಅನೇಕ ತಪ್ಪುಗಳಿಂದಾಗಿ 370ನೇ ವಿಧಿ ಶುರುವಾಯಿತು. ಅದರಅಂತ್ಯವಾಗಿದೆ. ಎಂದು ಹೇಳಿ 370ನೇ ವಿಧಿಯಕುರಿತು ಸವಿವರವಾಗಿ ಮಾಹಿತಿ ನೀಡಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ.ಎಂ.ಕೃಷ್ಣ ಭಟ್‍ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಕಾಲೇಜಿನ ಅಧ್ಯಕ್ಷರಾದ ಗಣೇಶ್‍ಜೋಷಿ, ಸಂಚಾಲಕರಾದ ವಿಜಯನಾರಾಯಣ ಕೆ.ಎಂ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ  ಅರವಿಂದ್ ವಳಕಟ್ಟೆ ಸ್ವಾಗತಿಸಿ, ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ.ರವೀಂದ್ರ ವಂದಿಸಿದರು. ಕಾನೂನು ಕಾಲೇಜಿನ ಉಪನ್ಯಾಸಕರಾದ  ಕುಮಾರ್‍ಎಸ್. ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

23 minutes ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

3 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

4 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

7 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

7 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

10 hours ago