Advertisement
ಸುದ್ದಿಗಳು

ಯುವಕರು ರಾಷ್ಟ್ರ ನಿರ್ಮಾಣದ ಕುರಿತು ಚಿಂತಿಸಿ: ಡಾ. ಕಲ್ಲಡ್ಕ ಪ್ರಭಾಕರ ಭಟ್

Share

ಪುತ್ತೂರು: ರಾಷ್ಟ್ರದ ಸಂಪತ್ತು ಎಂದರೆ ಯುವಕರು. ಈ ಯುವ ಸಂಪತ್ತು ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಅವರಿಗೆ ಸರಿಯಾಗಿ ದಾರಿ ತೋರಿಸುವ ಕೆಲಸವಾಗಬೇಕಿದೆ. ಏಕೆಂದರೆ ಯುವಕರು ವೃತ್ತಿಯ ಮೂಲಕ ಹಣ ಸಂಪಾದಿಸುವ ಹಿಂದೆ ಬಿದ್ದಿದ್ದಾರೆ. ಅದರ ಬದಲು ಜೀವನ ಮೌಲ್ಯಗಳನ್ನು ಅಳವಡಿಸುವ ಮುಖೇನ ಒಗ್ಗಟ್ಟಿನಿಂದ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ತಿಳಿಸಿದರು.

ಅವರು ನೆಹರೂನಗರದ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ವಿವೇಕಾನಂದ ಪದವಿ, ವಿವೇಕಾನಂದ ಕಾನೂನು ಕಾಲೇಜು, ವಿವೇಕಾನಂದ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಆಶ್ರಯದಲ್ಲಿ ಕರ್ನಾಟಕ ಫೋರಂ ಫಾರ್ ಇಂಟಗ್ರೆಟೆಡ್ ನ್ಯಾಶನಲ್ ಸೆಕ್ಯುರಿಟಿ ಸಹಯೋಗದಲ್ಲಿ ‘ಏಲಿಯನೇಶನ್ ಆಫ್ ಯೂತ್ ಆ್ಯಂಡ್ ಸೊಲ್ಯುಷನ್ಸ್’ ಎಂಬ ವಿಷಯದ ಕುರಿತ ‘ಸುಪಥ’ ರಾಜ್ಯಮಟ್ಟದ ವಿಚಾರಸಂಕಿರಣವನ್ನು ಉದ್ಘಾಟಿಸಿ  ಮಾತನಾಡಿದರು. ರಾಷ್ಟ್ರದ ಬಹುಸಂಖ್ಯೆಯ ತರುಣರು ತಮ್ಮ ಚಿಂತನೆ, ಯೋಚನೆ, ಶಕ್ತಿಯನ್ನು ಸಂಸ್ಕಾರ, ಸಂಸ್ಕೃತಿ ಹಾಗೂ ಜೀವನ ಮೌಲ್ಯಗಳ ಮುಖೇನ ರಾಷ್ಟ್ರದ ಅಭಿವೃದ್ಧಿಯ ಕುರಿತು ಯೋಚಿಸುವ ಕಾರ್ಯ ಯುವಜನತೆ ಮಾಡಬೇಕು. ಮಾತ್ರವಲ್ಲದೆ ಯುವಕರು ತಮ್ಮ ಗುರಿಯನ್ನು ರಾಷ್ಟ್ರಕ್ಕೆ ಹೆಸರು ತರುವಂತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಬೆಂಗಳೂರಿನ ಹಿರಿಯ ವಕೀಲ, ಫೋರಂ ಫಾರ್ ಇಂಟಗ್ರೆಟೆಡ್ ನ್ಯಾಶನಲ್ ಸೆಕ್ಯುರಿಟಿಯ ರಾಷ್ಟ್ರೀಯ ಕಾರ್ಯದರ್ಶಿ ವಿ. ಎಸ್. ಹೆಗ್ಡೆ ಮಾತನಾಡಿ, ದೇಶ ನಿರ್ಮಾಣದಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದೆ. ಹಾಗಾಗಿ ದೇಶದಲ್ಲಿ ನಡೆಯುತ್ತಿರುವ ಪ್ರತಿಯೊಂದು ಘಟನೆಯನ್ನು ಅವಲೋಕಿಸಬೇಕು ಏಕೆಂದರೆ ಪ್ರತಿ ಕ್ಷೇತ್ರದಲ್ಲಿ ಯುವಕರು ಕೆಲಸ ನಿರ್ವಹಿಸುತ್ತಿರುವುದರಿಂದ ಈ ಬಗ್ಗೆ ಗಂಭೀರ ಚಿಂತನೆಯನ್ನು ಮಾಡಬೇಕು ಎಂದು ತಿಳಿಸಿದರು.

ಭಾರತ ಸರಕಾರದ ನಿವೃತ್ತ ಕಾರ್ಯದರ್ಶಿ ಹಾಗೂ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ಕಾರ್ಯಾಧ್ಯಕ್ಷ ವಿ. ವಿ ಭಟ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಬಿಎಡ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ.ಎ.ವಿ.ನಾರಾಯಣ, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ. ಜಯರಾಮ ಭಟ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳಾದ ಜಯಂತಿ ನಾಯ್ಕ್, ಕೃಷ್ಣ ನಾಯ್ಕ್, ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಅಧಿಕಾರಿ ವೆಂಕಟೇಶ್, ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿಜಯ ಕಾರಂತ ಗಣಪತಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಮೇಘನಾ ಪ್ರಾರ್ಥಿಸಿದರು. ವಿವೇಕಾನಂದ ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಅಯ್ಯರ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

6 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

15 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

16 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

23 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

1 day ago